ಮಡಿಕೇರಿ – ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಬರೆ ಬಿರುಕು, ಕುಸಿಯುವ ಭೀತಿ

Prasthutha|

ಮಡಿಕೇರಿ: ಮಡಿಕೇರಿ – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕರ್ತೊಜೆ ಬಳಿ ಬರೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಈ ಭಾಗದಲ್ಲಿ 2018 ರಲ್ಲಿ ಮಣ್ಣು ಜರಿದು ರಸ್ತೆ ಬಂದ್ ಆಗಿತ್ತು. ಇದೀಗ ಹಾಗಿಂದಾಗೆ ಸಣ್ಣ ಪ್ರಮಾಣದಲ್ಲಿ ಮಣ್ಣು ಕುಸಿಯುತ್ತಿದ್ದು, ಮತ್ತೆ ಆತಂಕ ಎದುರಾಗಿದೆ.

- Advertisement -

ಈ ಹಿಂದೆ ಈ ಭಾಗದಲ್ಲಿ ಗುಡ್ಡ ಕುಸಿದಿತ್ತು. ಇದೀಗ ಭಾರಿ ಮಳೆಯಿಂದ ಬಿರುಕು ಕಾಣಿಸಿಕೊಂಡು ಕೆಳ ಭಾಗದಲ್ಲಿ ಮಣ್ಣು ಕುಸಿಯುತ್ತಿದೆ. ಮಳೆ ಮುಂದುವರಿದಿರುವುದರಿಂದ ಬಿರುಕು ಬಿಟ್ಟ ಸ್ಥಳದಿಂದ ಭಾರಿ ಪ್ರಮಾಣದ ಮಣ್ಣು ಕುಸಿಯುವ ಸಾಧ್ಯತೆ ಇದೆ. ಸ್ಥಳಕ್ಕೆ ಶಾಸಕ ಕೆ.ಜಿ ಬೋಪಯ್ಯ ಭೇಟಿ ನೀಡಿ ಪರಿಶೀಲಿಸಿದರು.

Join Whatsapp