ಮಡಿಕೇರಿ – ಮಂಗಳೂರು ಸಂಚಾರಕ್ಕೆ ಅವಕಾಶ

Prasthutha|

ಮಡಿಕೇರಿ: ಬರೆ ಕುಸಿತದಿಂದ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದ್ದ ಮಡಿಕೇರಿ – ಮಂಗಳೂರು ಸಂಚಾರಕ್ಕೆ ಮುಕ್ತ ಅವಕಾಶ ಕಲ್ಪಿಸಿರುವುದಾಗಿ ಜಿಲ್ಲಾಧಿಕಾರಿ ಡಾ. ಬಿ.ಸಿ ಸತೀಶ್ ಆದೇಶ ಹೊರಡಿಸಿದ್ದಾರೆ.

- Advertisement -

ಮದೆನಾಡು ಬಳಿ ಭೂಕುಸಿತ ಉಂಟಾಗಿದ್ದ ಸ್ಥಳದಲ್ಲಿ ಶೇ. 75 ರಷ್ಟು ಮಣ್ಣು ತೆರವುಗೊಳಿಸಲಾಗಿದ್ದು, ಉಳಿಕೆ ಮಣ್ಣಿನ ತೆರವು ಕಾಮಗಾರಿ ಕೈಗೊಳ್ಳಲಾಗಿದ್ದು ಯಾವುದೇ ಸಮಸ್ಯೆ ಕಂಡುಬಂದಿರುವುದಿಲ್ಲ. ಹೀಗಾಗಿ ಇಂದಿನಿಂದಲೇ ಜಾರಿಗೆ ಬರುವಂತೆ ರಾತ್ರಿ ಕೂಡ ಮಡಿಕೇರಿ – ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಮಡಿಕೇರಿ – ಮಂಗಳೂರು ಹೆದ್ದಾರಿಯಲ್ಲಿ ಹಗಲು ರಾತ್ರಿ ವಾಹನ ಸಂಚಾರಕ್ಕೆ ಯಾವುದೇ ನಿರ್ಬಂಧ ಇರುವುದಿಲ್ಲ.

Join Whatsapp