ಮುರಘಾ ಶ್ರೀಗಳ ಲೈಂಗಿಕ ಪ್ರಕರಣ ಕುರಿತ ಇಬ್ಬರು ಮಹಿಳೆಯರ ಆಡಿಯೋ ವೈರಲ್: ಸ್ವಾಮೀಜಿ ಆತ್ಮಹತ್ಯೆ

Prasthutha|

ಬೆಳಗಾವಿ: ಮಹಿಳೆಯೊಬ್ಬರ ಜೊತೆ ಮಾತನಾಡಿದ ಆಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ನೊಂದ ಬೈಲಹೊಂಗಲ ತಾಲೂಕಿನ ನೆಗಿನಹಾಳದ ಗುರು ಮಡಿವಾಳೇಶ್ವರ ಮಠದ ಸ್ವಾಮೀಜಿ ಶಂಕಾಸ್ಪದವಾಗಿ ಸಾವಿಗೆ ಶರಣಾಗಿದ್ದಾರೆ.

- Advertisement -

ಮುರುಘಾ ಮಠದ ಸ್ವಾಮೀಜಿಗಳ ಮೇಲೆ ಇರುವ ಆರೋಪದ ಬೆನ್ನಲ್ಲೇ ಇಬ್ಬರು ಮಹಿಳೆಯರು ಮಾತನಾಡಿರುವ ಆಡಿಯೋ ರಿಲೀಸ್ ಆಗಿರುವುದೇ ಈ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.

ಮುರಘಾ ಶ್ರೀಗಳ ಲೈಂಗಿಕ ಪ್ರಕರಣ ಕುರಿತು ಇಬ್ಬರು ಮಹಿಳೆಯರು ಮಾತನಾಡಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸುದ್ದಿಯಾಗುತ್ತಿದ್ದು, ಅದರ ಬೆನ್ನಲ್ಲೇ ನೇಗಿನಹಾಳದ ಬಸವಸಿದ್ದಲಿಂಗ ಸ್ವಾಮೀಜಿ ಮನ ನೊಂದು ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

- Advertisement -

ಕೆಲವು ಸ್ವಾಮೀಜಿಗಳ ಲೈಂಗಿಕ ಹಗರಣದ ಕುರಿತು ಓರ್ವ ಮಹಿಳೆ ಆಡಿಯೊದಲ್ಲಿ ಹೆಸರು ಸಹಿತ ಪ್ರಸ್ತಾಪ ಮಾಡಿದ್ದಾರೆ. ಆಡಿಯೊದಲ್ಲಿ ಇಬ್ಬರು ಮಹಿಳೆಯರು ಮಾತನಾಡಿದ್ದಾರೆ. ಅವರ ಪೈಕಿ ಓರ್ವ ಮಹಿಳೆ ಕೆಲವೊಂದು ಪ್ರಶ್ನೆಗಳನ್ನು ಇನ್ನೊಂದು ಮಹಿಳೆಗೆ ಕೇಳಿದ್ದಾರೆ. ಬೆಳಗಾವಿಯ ಮಠದಲ್ಲಿಯೇ ಅನೇಕ ವರ್ಷಗಳಿಂದ ತಾವು ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡಿರುವ ಇನ್ನೊಂದು ಮಹಿಳೆ ಮಠಗಳಲ್ಲಿ ನಡೆಯುತ್ತಿದೆ ಎನ್ನಲಾದ ಲೈಂಗಿಕ ದೌರ್ಜನ್ಯಗಳ ಕುರಿತು ವಿವರಣೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಕೆಲವೊಂದು ಮಠಗಳು ಹಾಗೂ ಕೆಲವು ಸ್ವಾಮೀಜಿಗಳ ಹೆಸರನ್ನೂ ಆಕೆ ಆಡಿಯೋದಲ್ಲಿ ಹೇಳಿದ್ದಾರೆ. ಆ ಆಡಿಯೊದಲ್ಲಿ ನೇಗಿನಹಾಳ ಸ್ವಾಮೀಜಿ ಹೆಸರು ಕೂಡ ಇದೆ. ಈ ಹಿನ್ನೆಲೆಯಲ್ಲಿ ಸ್ವಾಮೀಜಿ ಮನನೊಂದುಕೊಂಡು ಇಂಥದ್ದೊಂದು ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

ವೈರಲ್ ಆಡಿಯೋ ಕುರಿತು ಸೂಕ್ತ ತನಿಖೆ ನಡೆಸುವಂತೆ ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೈಲಹೊಂಗಲ ಡಿವೈಎಸ್ಪಿ ಅವರಿಗೆ ಮಠದ ಆಡಳಿತ ಮಂಡಳಿ ದೂರು ನೀಡಿದೆ. ಲಿಂಗಾಯತ ಧರ್ಮದ ಮಠಾಧೀಶರನ್ನು ಗುರಿಯಾಗಿಸಿಕೊಂಡು ಪಟ್ಟಭದ್ರ ಹಿತಾಸಕ್ತಿಗಳು ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ.

ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದು ಮಠಾಧೀಶರ ಚಾರಿತ್ರ್ಯಕ್ಕೆ ಧಕ್ಕೆ ಆಗುವ ರೀತಿಯಲ್ಲಿ ಲಿಂಗಾಯತ ಧರ್ಮದವರಿಗೆ ಮುಜುಗರ ಮಾಡಿ ಧಾರ್ಮಿಕ ಭಾವನೆಗಳಿಗೆ ದಕ್ಕೆ ಉಂಟು ಮಾಡುತ್ತಿದ್ದಾರೆ. ಇವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಹೇಳಲಾಗಿದೆ.

ಘಟನಾ ಸ್ಥಳಕ್ಕೆ ಬೈಲಹೊಂಗಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಂಭಾಷಣೆಯಲ್ಲಿ ಏನಿದೆ:
ಮಠದ ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಮೇಲೆ ಚಿತ್ರದುರ್ಗ ಮುರುಘಾ ಶರಣರ ಬಂಧನವಾಗಿರುವ ಸಂದರ್ಭದಲ್ಲಿ ಇಬ್ಬರು ಮಹಿಳೆಯರ ನಡುವಿನ ಸಂಭಾಷಣೆ ವೈರಲ್‌ ಆಗಿದೆ. ಈ ಪ್ರಕರಣದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕಾವಿಧಾರಿಗಳ ಬಗ್ಗೆ ನಾನಾ ನೆಗೆಟಿವ್ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಇದರ ಮಧ್ಯೆ ಕರ್ನಾಟಕದ ಹಲವು ಮಠದ ಸ್ವಾಮೀಜಿಗಳು ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸುವ ಆಡಿಯೋ ವೈರಲ್ ಆಗಿದೆ.
ಇಬ್ಬರು ಮಹಿಳೆಯರು ಪರಸ್ಪರ ಮಾತನಾಡಿಕೊಂಡಿರುವ ಆಡಿಯೋ ಇದಾಗಿದ್ದು, ಕರ್ನಾಟಕದ ಹಲವು ಸ್ವಾಮೀಜಿಗಳ ಮೇಲೆ ಆರೋಪಿಸಿದ್ದಾರೆ. ರಾಜ್ಯದ ಹಲವು ಮಠಗಳ ಸ್ವಾಮೀಜಿಗಳು ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ. ಹೆಣ್ಣು ಮಕ್ಕಳನ್ನು ಹಾಳು ಮಾಡಿದ್ದಾರೆ. ಬಹಳಷ್ಟು ಜನ ಕೆಟ್ಟವರೇ ಎಂದು ಮಹಿಳೆಯರಿಬ್ಬರ ಮಾತನಾಡಿರುವ ಆಡಿಯೋದಲ್ಲಿದೆ.
ಬೆಳಗಾವಿಯ ಸತ್ಯಕ್ಕ ಎಂದು ಹೇಳಿಕೊಂಡಿರುವ ಮಹಿಳೆಯೊಬ್ಬರು ಗಂಗಾವತಿಯ ಇನ್ನೊಬ್ಬ ಮಹಿಳೆ ಜೊತೆಗೆ ಮೊಬೈಲ್‌ ನಲ್ಲಿ ಮಾತನಾಡಿದ್ದಾರೆ. ಹೆಣ್ಮಕ್ಳನ್ನ ಲೈಂಗಿಕ ಚಟುವಟಿಕೆಗೆ ಬಳಸಿಕೊಳ್ಳುವ ರಾಜ್ಯದ ಮಠಗಳು, ಶ್ರೀಗಳ ಹೆಸರುಗಳನ್ನು ಸಹ ಬಹಿರಂವಾಗಿ ಹೇಳಿಕೊಂಡಿದ್ದಾಳೆ
ಮಹಿಳೆಯ ಆಡಿಯೋ:
ತಮಿಳುನಾಡು ಸತ್ಯಕ್ಕ ಅಂದರೆ ಕೆಲವು ಸ್ವಾಮೀಜಿಗಳು ಮಾತಾಡುವುದಿಲ್ಲ. ನಾನು 10 ವರ್ಷ ತಮಿಳುನಾಡಿನಲ್ಲಿದ್ದು, ಬಸವ ಸೇವಾ ಸಮತಿಯನ್ನು ಕಟ್ಟಿ ಬಿಟ್ಟು ಬಂದಿದ್ದೇನೆ. ಈಗ ಈ ಸ್ವಾಮೀಜಿಯ ಘಟನೆ ಸುಳ್ಳು ಅಂತ ಕೆಲವರು ಮಾತನಾಡುತ್ತಿದ್ದಾರೆ. ಆದರೆ, ಅವರ ಬಳಿ ಇದ್ದ ಹೆಣ್ಣು ಮಕ್ಕಳಿಗೇ ಗೊತ್ತು ಅವರು ಎಂಥವರು ಎಂದು ಮಹಿಳೆ ಹೇಳಿದ್ದಾಳೆ.
ಇನ್ನು ಆ ಮಹಿಳೆ ಮಾತು ಮುಂದುರಿಸಿದ್ದು, ಮದುರೈನಲ್ಲಿರುವ ಮಠದ ಹೆಸರಿನಲ್ಲಿ ಐದು ಎಕರೆ ಜಮೀನಿದೆ. ನನ್ನೊಂದಿಗೆ ಚೆನ್ನಾಗಿರು. ಎಲ್ಲಾ ವ್ಯವಸ್ಥೆ ಮಾಡುತ್ತೇನೆ ಎಂದು ಒಬ್ಬ ಸ್ವಾಮೀಜಿ ನನಗೆ ಆಫರ್ ಕೊಟ್ಟಿದ್ರು. ಎಲ್ಲ ಹೊರಗೆ ಹಾಕಬಹುದು. ಆದರೆ, ರಕ್ಷಣೆ ಇಲ್ಲ ಎಂದು ಮಹಿಳೆ ಮಾತನಾಡಿದ್ದಾಳೆ.
ಶಿರಸಿಯ ಸ್ವಾಮೀಜಿ:
ಸ್ವಾಮೀಜಿಯೊಬ್ಬರು ಶಿರಸಿಯ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಬಳಿಕ ಆಕೆ ಪ್ರಗ್ನೆಂಟ್ ಆಗಿದ್ದಳು. ಸ್ವಾಮೀಜಿಗಳು ಆಸ್ಟ್ರೇಲಿಯಾ ಪ್ರವಾಸಕ್ಕೆ ಹೋಗಿ ಬರುವುದರೊಳಗೆ ಪೋಷಕರು ಆ ಯುವತಿಗೆ ಲೆಕ್ಚರರ್ ಒಬ್ಬರ ಜೊತೆ ಮದುವೆ ಮಾಡಿಕೊಟ್ಟರು. ಮಠದ ಸ್ವಾಮಿಗಳೇ ಮದ್ವೆ ಮಾಡಿಕೊಟ್ಟಿದ್ದರು
ಕೆಲವು ಸ್ವಾಮೀಜಿಗಳ ಲೈಂಗಿಕ ಹಗರಣದ ಕುರಿತು ಓರ್ವ ಮಹಿಳೆ ಆಡಿಯೊದಲ್ಲಿ ಹೆಸರು ಸಹಿತ ಪ್ರಸ್ತಾಪ ಮಾಡಿದ್ದಾರೆ. ಆಡಿಯೊದಲ್ಲಿ ಇಬ್ಬರು ಮಹಿಳೆಯರು ಮಾತನಾಡಿದ್ದಾರೆ. ಅವರ ಪೈಕಿ ಓರ್ವ ಮಹಿಳೆ ಕೆಲವೊಂದು ಪ್ರಶ್ನೆಗಳನ್ನು ಇನ್ನೊಂದು ಮಹಿಳೆಗೆ ಕೇಳಿದ್ದಾರೆ. ಬೆಳಗಾವಿಯ ಮಠದಲ್ಲಿಯೇ ಅನೇಕ ವರ್ಷಗಳಿಂದ ತಾವು ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡಿರುವ ಇನ್ನೊಂದು ಮಹಿಳೆ ಮಠಗಳಲ್ಲಿ ನಡೆಯುತ್ತಿದೆ ಎನ್ನಲಾದ ಲೈಂಗಿಕ ದೌರ್ಜನ್ಯಗಳ ಕುರಿತು ವಿವರಣೆ ನೀಡಿದ್ದಾರೆ.
ಡೆತ್ ನೋಟ್ :
ಈ ಸಂದರ್ಭದಲ್ಲಿ ಕೆಲವೊಂದು ಮಠಗಳು ಹಾಗೂ ಕೆಲವು ಸ್ವಾಮೀಜಿಗಳ ಹೆಸರನ್ನೂ ಆಕೆ ಆಡಿಯೋದಲ್ಲಿ ಹೇಳಿದ್ದಾರೆ. ಆ ಆಡಿಯೊದಲ್ಲಿ ನೇಗಿನಹಾಳ ಸ್ವಾಮೀಜಿ ಹೆಸರು ಕೂಡ ಇದೆ. ಈ ಹಿನ್ನೆಲೆಯಲ್ಲಿ ಸ್ವಾಮೀಜಿ ಮನನೊಂದು ಇಂಥದ್ದೊಂದು ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
ಡೆತ್ ನೋಟ್ ನಲ್ಲಿ ಸ್ವಾಮೀಜಿ ಮಹಿಳೆಯರ ಹೆಸರುಗಳನ್ನು ಉಲ್ಲೇಖಿಸಿದ್ದಾರೆ.
ಘಟನಾ ಸ್ಥಳಕ್ಕೆ ಬೈಲಹೊಂಗಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Join Whatsapp