Home ಟಾಪ್ ಸುದ್ದಿಗಳು ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಅಪರಾಧಿಗೆ ‘ವಿಶಿಷ್ಟ ಶಿಕ್ಷೆ’ ನೀಡಿದ ಮದ್ರಾಸ್ ಹೈಕೋರ್ಟ್‌

ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಅಪರಾಧಿಗೆ ‘ವಿಶಿಷ್ಟ ಶಿಕ್ಷೆ’ ನೀಡಿದ ಮದ್ರಾಸ್ ಹೈಕೋರ್ಟ್‌

ಚೆನ್ನೈ: ಮದ್ಯಪಾನ‌ ಮಾಡಿ ವಾಹನ ಚಲಾಯಿಸಿ ಮೂವರು ಪಾದಚಾರಿಗಳನ್ನ ಗಾಯಗೊಳಿಸಿದ ವ್ಯಕ್ತಿಯೊಬ್ಬನಿಗೆ, ನಗರದ ಜನನಿಬಿಡ ಜಂಕ್ಷನ್‌ನಲ್ಲಿ ಎರಡು ವಾರಗಳ ಕಾಲ ಕುಡಿದು ವಾಹನ ಚಲಾಯಿಸುವುದರ ವಿರುದ್ಧ ಜಾಗೃತಿ ಮೂಡಿಸುವ ಕರಪತ್ರಗಳನ್ನು ಹಂಚಬೇಕು ಎಂದು ಮದ್ರಾಸ್ ಹೈಕೋರ್ಟ್ ಆದೇಶಿಸಿದೆ.

ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿ ಮೂವರು ಪಾದಚಾರಿಗಳನ್ನು ಗಾಯಗೊಳಿಸಿದ ಆರೋಪದ ಮೇಲೆ ಬಂಧಿತನಾಗಿದ್ದ ಯುವಕನಿಗೆ ಜಾಮೀನು ಮಂಜೂರು ಮಾಡುವ ಸಂದರ್ಭದಲ್ಲಿ ನ್ಯಾಯಮೂರ್ತಿ ಎ ಡಿ ಜಗದೀಶ್ ಚಂದ್ರ ಅವರು ಈ ನಿರ್ದೇಶನ ನೀಡಿದ್ದಾರೆ.

25,000 ರೂ. ಬಾಂಡ್ ಮತ್ತು ಇಬ್ಬರು ಶ್ಯೂರಿಟಿ ಮತ್ತಿತರ ಷರತ್ತಿನೊಂದಿಗೆ ನ್ಯಾಯಾಲಯವು ಜಾಮೀನು ನೀಡಿದ್ದು, ಅರ್ಜಿದಾರರು ಎರಡು ವಾರಗಳ ಕಾಲ ಪ್ರತಿದಿನ ಅಡ್ಯಾರ್ ಪೊಲೀಸ್ ಠಾಣೆಗೆ ಹಾಜರಾಗಬೇಕು ಮತ್ತು ಬೆಳಿಗ್ಗೆ 9-10 ಮತ್ತು ಸಂಜೆ 5-7 ರವರೆಗೆ ಕರಪತ್ರಗಳನ್ನು ಹಂಚಬೇಕು. ಅಲ್ಲದೇ ಅಗತ್ಯವಿರುವಾಗ ಪೊಲೀಸರ ಮುಂದೆ ವರದಿ ಮಾಡಬೇಕು ಎಂದು ಹೇಳಿದೆ.

Join Whatsapp
Exit mobile version