ಮಹದಾಯಿ ಹೋರಾಟ ಮುಂದುವರಿಯಲಿದೆ: ಗೋವಾ ಸಿ ಎಂ ಪ್ರಮೋದ್ ಸಾವಂತ್

Prasthutha|

ಪಣಜಿ: ಮಹದಾಯಿ ನದಿ ನೀರಿಗಾಗಿ ಹೋರಾಟ ಮುಂದುವರಿಸಲಾಗುವುದು ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.
ಕಳಸಾ- ಬಂಡೂರಿ ನಾಲಾ ಯೋಜನೆಯ ವಿಸ್ತೃತಾ ಯೋಜನಾ ವರದಿಗೆ ಕೇಂದ್ರ ಜಲ ಆಯೋಗ ಅನುಮೋದನೆ ನೀಡಿದ ಬೆನ್ನಲ್ಲೇ ಸಾವಂತ್ ಈ ಹೇಳಿಕೆ ನೀಡಿದ್ದಾರೆ.

- Advertisement -

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಡಿಪಿಆರ್ ಅನುಮೋದನೆ ಹೊರತಾಗಿಯೂ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅಡಿಯಲ್ಲಿ ಕರ್ನಾಟಕ ಕಳಸಾ ನದಿ ನೀರನ್ನು ತಿರುಗಿಸಲು ಸಾಧ್ಯವಿಲ್ಲ. ಕೂಡಲೇ ಮಹದಾಯಿ ನೀರು ನಿರ್ವಹಣಾ ಪ್ರಾಧಿಕಾರ ರಚಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಹೇಳಿದರು.

ಈ ಮಧ್ಯೆ ಬಿಜೆಪಿ ಆಡಳಿತವಿರುವ ಕರ್ನಾಟಕದ ಪರವಾಗಿ ಪ್ರಮೋದ್ ಸಾವಂತ್ ರಾಜ್ಯದ ಹಿತಾಸಕ್ತಿಯನ್ನು ಬಿಟ್ಟುಕೊಟ್ಟಿದ್ದಾರೆ ಎಂದು ಅಲ್ಲಿನ ಪ್ರತಿಪಕ್ಷಗಳು ಆರೋಪಿಸಿವೆ.

Join Whatsapp
Exit mobile version