ಬಾಲ್ಯದಲ್ಲಿ ಅಪ್ಪನ ಹೆಗಲ ಮೇಲೆ ಕುಳಿತು ದಸರಾ ನೋಡುತ್ತಿದ್ದೆ: ಸಿದ್ದರಾಮಯ್ಯ

Prasthutha|

►ಸಿಎಂಗೆ ದಸರಾ ಆಹ್ವಾನ ಪತ್ರಿಕೆ ನೀಡಿದ ಸಚಿವ ಹೆಚ್.ಸಿ.ಮಹದೇವಪ್ಪ ನಿಯೋಗ

- Advertisement -


ಬೆಂಗಳೂರು: ಅಪ್ಪನ ಹೆಗಲ ಮೇಲೆ ಕುಳಿತು ದಸರಾ ನೋಡುತ್ತಿದ್ದ ನನಗೆ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ದಸರಾದಲ್ಲಿ ಪಾಲ್ಗೊಳ್ಳುವ ಅವಕಾಶ ಸಿಕ್ಕಿದ್ದು ಸೌಭಾಗ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದಿನ ನೆನಪುಗಳನ್ನು ಸ್ಮರಿಸಿದರು. ದಸರಾದಲ್ಲಿ ಭಾಗವಹಿಸಲು ನೀಡಿದ ಆಹ್ವಾನ ಪತ್ರಿಕೆಯನ್ನು ಅವರು ಸಂತೋಷದಿಂದ ಸ್ವೀಕರಿಸಿದರು.


ಸಿಎಂ ಸಿದ್ದರಾಮಯ್ಯನವರಿಗೆ ಇಂದು ಮೈಸೂರು ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ನೇತೃತ್ವದ ಜಿಲ್ಲಾಡಳಿತದ ನಿಯೋಗ ದಸರಾ ಆಹ್ವಾನಪತ್ರಿಕೆ ನೀಡಿತು. ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ ನಿಯೋಗದಲ್ಲಿ ಮೇಯರ್ ಶಿವಕುಮಾರ್, ಶಾಸಕ ರವಿಶಂಕರ್, ಎ.ಆರ್.ಕೃಷ್ಣಮೂರ್ತಿ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿ.ಪಂ ಸಿಇಒ ಕೆ.ಎಂ.ಗಾಯಿತ್ರಿ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು ಸೇರಿದಂತೆ ಹಲವು ಪ್ರಮುಖರು ಇದ್ದರು.



Join Whatsapp