ಮಹಾರಾಷ್ರ ವಿಧಾನಸಭೆಯಲ್ಲಿ ಇಂದು ವಿಶ್ವಾಸ ಮತಯಾಚನೆ: ಶಿವಸೇನೆ ಶಾಸಕಾಂಗ ಪಕ್ಷದ ನಾಯಕರಾಗಿ ಏಕನಾಥ್ ಶಿಂಧೆ ಮರುನೇಮಕ

Prasthutha|

ಮುಂಬೈ: ಏಕನಾಥ್ ಶಿಂಧೆ-ಬಿಜೆಪಿ ಸರ್ಕಾರದ ಇಂದಿನ ನಿರ್ಣಾಯಕ ವಿಶ್ವಾಸಮತ ಯಾಚನೆಗೂ ಮುನ್ನ ಮಹಾರಾಷ್ಟ್ರ ವಿಧಾನಸಭೆಯ ನೂತನ ಸ್ಪೀಕರ್ ಶಿವಸೇನೆ ಶಾಸಕ ಅಜಯ್ ಚೌಧರಿ ಅವರನ್ನು ಶಾಸಕಾಂಗ ಪಕ್ಷದ ನಾಯಕ ಸ್ಥಾನದಿಂದ ಕೆಳಗಿಳಿಸಿ ಶಿಂಧೆ ಅವರನ್ನು ಮತ್ತೊಮ್ಮೆ ಆ ಸ್ಥಾನಕ್ಕೆ ಮರುನೇಮಕ ಮಾಡಿದ್ದಾರೆ.

- Advertisement -

ಭಾನುವಾರ ಸ್ಪೀಕರ್ ರಾಹುಲ್ ನರ್ವೇಕರ್ ಅವರ ಕಚೇರಿ ಹೊರಡಿಸಿದ ಪತ್ರದಲ್ಲಿ ಶಿಂಧೆ ಅವರನ್ನು ಶಿವಸೇನೆಯ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಮರುನೇಮಕಮಾಡಲಾಗಿದ್ದಲ್ಲದೆ, ಉದ್ಧವ್ ಠಾಕ್ರೆ ಬಣಕ್ಕೆ ಸೇರಿದ ಸುನಿಲ್ ಪ್ರಭು ಅವರನ್ನು ತೆಗೆದುಹಾಕಿ, ಶಿವಸೇನೆ ಶಾಸಕಾಂಗ ಪಕ್ಷದ ನಾಯಕನ ಮುಖ್ಯ ಸಚೇತಕರಾಗಿ ಭರತ್ ಗೋಗವಾಲೆ ಅವರನ್ನು ನೇಮಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ..

Join Whatsapp