ಗಡಿ ವಿವಾದ ಹಿನ್ನೆಲೆ: ಮಹಾರಾಷ್ಟ್ರ-ಬೆಳಗಾವಿ ಬಸ್ ಸೇವೆ ಸ್ಥಗಿತ

Prasthutha|

ಬೆಳಗಾವಿ: ಬೆಳಗಾವಿಯಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಭುಗಿದೇಳುವ ಸಾಧ್ಯತೆಯ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಿಂದ ಬೆಳಗಾವಿಗೆ ಬರಬೇಕಿದ್ದ ಸುಮಾರು 300 ಬಸ್’ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.

- Advertisement -


ಕರ್ನಾಟಕದ ಬಸ್ಗಳಿಗೆ ಔರಂಗಾಬಾದ್ ಜಿಲ್ಲೆಯ ದೌಂಡ್ ಗ್ರಾಮದಲ್ಲಿ ಕಪ್ಪು ಮಸಿ ಬಳಿದ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಕರ್ನಾಟಕದಲ್ಲಿಯೂ ಮಹಾರಾಷ್ಟ್ರದ ಬಸ್ ಗಳಿಗೆ ಮಸಿ ಬಳಿಯುವ ಆತಂಕ ಇರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಿಂದ ಬೆಳಗಾವಿಗೆ ಬರಬೇಕಿದ್ದ ಬಸ್ ಸ್ಥಗಿತಗೊಳಿಸಲಾಗಿದೆ.



Join Whatsapp
Exit mobile version