ಮಹಾರಾಷ್ಟ್ರ ರಾಜ್ಯಪಾಲರು ರಾಜೀನಾಮೆಗೆ ಮುಂದಾಗಿದ್ದಾರೆ: ಸಂಜಯ್ ರಾವತ್

Prasthutha|

ಮುಂಬೈ: ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರು ಛತ್ರಪತಿ ಶಿವಾಜಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂಬ ಗುಮಾನಿ ಮಧ್ಯೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಶಿವಸೇನಾ ಸಂಸದ ಸಂಜಯ್ ರಾವುತ್ ತಿಳಿಸಿದ್ದಾರೆ.

- Advertisement -

ಆದರೆ ಈ ಕುರಿತು ವರದಿಯನ್ನು ರಾಜಭವನ ಕಚೇರಿ ನಿರಾಕರಿಸಿದೆ ಎಂದು ಹೇಳಲಾಗಿದೆ.

ಮಹಾ ವಿಕಾಸ್ ಅಘಾಡಿ ಮೈತ್ರಿಯ ಪಾಲುದಾರರಾದ ಶರದ್ ಪವಾರ್ ನೇತೃತ್ವದ ಎನ್.ಸಿ.ಪಿ, ಕಾಂಗ್ರೆಸ್ ಮತ್ತು ಶಿವಸೇನೆಯ ಉದ್ಧವ್ ಠಾಕ್ರೆ ರಾಜ್ಯಪಾಲ ಕೊಶ್ಯಾರಿ ಅವರ ಜೊತೆ ಭಿನಾಭಿಪ್ರಾಯ ಹೊಂದಿದ್ದಾರೆ.

Join Whatsapp