Home ಟಾಪ್ ಸುದ್ದಿಗಳು ಮಹಾರಾಷ್ಟ್ರ ರಾಜ್ಯಪಾಲರು ರಾಜೀನಾಮೆಗೆ ಮುಂದಾಗಿದ್ದಾರೆ: ಸಂಜಯ್ ರಾವತ್

ಮಹಾರಾಷ್ಟ್ರ ರಾಜ್ಯಪಾಲರು ರಾಜೀನಾಮೆಗೆ ಮುಂದಾಗಿದ್ದಾರೆ: ಸಂಜಯ್ ರಾವತ್

ಮುಂಬೈ: ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರು ಛತ್ರಪತಿ ಶಿವಾಜಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂಬ ಗುಮಾನಿ ಮಧ್ಯೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಶಿವಸೇನಾ ಸಂಸದ ಸಂಜಯ್ ರಾವುತ್ ತಿಳಿಸಿದ್ದಾರೆ.

ಆದರೆ ಈ ಕುರಿತು ವರದಿಯನ್ನು ರಾಜಭವನ ಕಚೇರಿ ನಿರಾಕರಿಸಿದೆ ಎಂದು ಹೇಳಲಾಗಿದೆ.

ಮಹಾ ವಿಕಾಸ್ ಅಘಾಡಿ ಮೈತ್ರಿಯ ಪಾಲುದಾರರಾದ ಶರದ್ ಪವಾರ್ ನೇತೃತ್ವದ ಎನ್.ಸಿ.ಪಿ, ಕಾಂಗ್ರೆಸ್ ಮತ್ತು ಶಿವಸೇನೆಯ ಉದ್ಧವ್ ಠಾಕ್ರೆ ರಾಜ್ಯಪಾಲ ಕೊಶ್ಯಾರಿ ಅವರ ಜೊತೆ ಭಿನಾಭಿಪ್ರಾಯ ಹೊಂದಿದ್ದಾರೆ.

Join Whatsapp
Exit mobile version