ಮಹಾರಾಷ್ಟ್ರ: ಸಾಮಾಜಿಕ ಜಾಲತಾಣಗಳಲ್ಲಿ ವಿವಾದಾತ್ಮಕ ಪೋಸ್ಟ್, ಘರ್ಷಣೆ ವೇಳೆ ನಾಲ್ವರು ಪೊಲೀಸರಿಗೆ ಗಾಯ

Prasthutha|

ಪುಣೆ: ಮೊಘಲ್ ದೊರೆ ಔರಂಗಜೇಬ್ ವಿರುದ್ಧ ಫೇಸ್ ಬುಕ್ ನಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿರುವುದನ್ನು ಖಂಡಿಸಿ ಉದ್ರಿಕ್ತ ಗುಂಪೊಂದು ಮಹಾರಾಷ್ಟ್ರದ ಉಸ್ಮಾನಾಬಾದ್ ರಸ್ತೆಯಲ್ಲಿ ನಡೆಸಿದ ಪ್ರತಿಭಟನೆ ಹಿಂಸಾತ್ಮಕ ರೂಪ ತಾಳಿದೆ. ಈ ವೇಳೆ ಕಲ್ಲು ತೂರಾಟ ನಡೆದಿದ್ದು, ನಾಲ್ವರು ಪೊಲೀಸರಿಗೆ ಗಂಭೀರ ಗಾಯಗಳಾಗಿವೆ ಎಂದು ಮೂಲಗಳು ತಿಳಿಸಿವೆ.

- Advertisement -

ವಿಜಯ ಚೌಕ್ ನಲ್ಲಿ ರಾತ್ರಿ 10.30 ಕ್ಕೆ ಈ ಘಟನೆ ನಡೆದಿದೆ. ಸ್ಥಳದಲ್ಲಿದ್ದ ಒಂದು ಪೊಲೀಸ್ ವಾಹನ, ಅಟೋ ರಿಕ್ಷಾ ಸಹಿತ ವಾಹನಗಳನ್ನು ದುಷ್ಕರ್ಮಿಗಳ ತಂಡ ಧ್ವಂಸಗೈದಿದೆ. ದುಷ್ಕರ್ಮಿಗಳ ಪುಂಡಾಟಿಕೆಯನ್ನು ನಿಯಂತ್ರಿಸಲು ಮುಂದಾದ ಪೊಲೀಸರ ಮೇಲೆ ಹಲ್ಲೆ ಉದ್ರಿಕ್ತ ತಂಡ ಹಲ್ಲೆ ನಡೆಸಿದೆ. ಈ ವೇಳೆ ನಾಲ್ವರು ಪೊಲೀಸರು ಗಂಭೀರವಾಗಿ ಗಾಯಗೊಂಡರು ಎಂದು ಉಸ್ಮಾನಾಬಾದ್ ಪೊಲೀಸ್ ಠಾಣಾಧಿಕಾರಿ ಸುರೇಶ್ ಬುಧವಂತ್ ಮಾಧ್ಯಮಕ್ಕೆ ತಿಳಿಸಿದ್ದಾರೆ.

Join Whatsapp