ಲೋಕಸಭೆಯಿಂದ ಮಹುವಾ ಮೊಯಿತ್ರಾ ಉಚ್ಛಾಟನೆ: ಜ.3ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ

Prasthutha|

ನವದೆಹಲಿ: ಹಣಕ್ಕಾಗಿ ಪ್ರಶ್ನೆ ಕೇಳಿದ ಆರೋಪದಲ್ಲಿ ತಮ್ಮನ್ನು ಲೋಕಸಭೆಯಿಂದ ಉಚ್ಛಾಟನೆಗೊಳಿಸಿರುವ ನಿರ್ಣಯವನ್ನು ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ ಮೊಯಿತ್ರಾ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್, ಮುಂದಿನ ವರ್ಷ ಜನವರಿ 3ಕ್ಕೆ ಮುಂದೂಡಿದೆ.

- Advertisement -

ನ್ಯಾಯಮೂರ್ತಿ ಎಸ್‌ವಿಎನ್ ಭಟ್ಟಿ ಅವರನ್ನೊಳಗೊಂಡ ದ್ವಿಸದಸ್ಯ ಪೀಠದಲ್ಲಿ ಒಬ್ಬರಾದ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು, ನಾನು ಫೈಲ್ಗಳನ್ನು ನೋಡಿಲ್ಲ, ಆದ್ದರಿಂದ ಅದನ್ನು ಪರಿಶೀಲಿಸಲು ಸ್ವಲ್ಪ ಸಮಯ ಬೇಕು ಎಂದು ಹೇಳಿದರು. ‘ನಾನು ಫೈಲ್ ಅನ್ನು ಪರಿಶೀಲಿಸಲು ಬಯಸುತ್ತೇನೆ. ನಾವು ಜನವರಿ 3 ರಂದು ಅರ್ಜಿಯ ವಿಚಾರಣೆ ನಡೆಸಬಹುದು’ ಎಂದು ಹೇಳಿದರು.

Join Whatsapp