ಕರ್ನಾಟಕವನ್ನು ‘ಹಿಂದೂ ಸಾಮ್ರಾಜ್ಯ’ ಮಾಡುತ್ತೇನೆ: ವಿವಾದಾತ್ಮಕ ಹೇಳಿಕೆ ನೀಡಿದ ಯತ್ನಾಳ್

Prasthutha|

- Advertisement -

ವಿಜಯಪುರ: ಶಿವಾಜಿ ಮಹಾರಾಜರಂತೆ ಕರ್ನಾಟಕವನ್ನು ಹಿಂದೂ ಸಾಮ್ರಾಜ್ಯ ಮಾಡುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ‌ ನೀಡಿದ್ದಾರೆ.

ವಿಜಯನಗರದ ಸಿದ್ಧೇಶ್ವರ ದೇವಸ್ಥಾನದ ಬಳಿ ವಿವೇಕಾನಂದ ಸೇನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಬಸನಗೌಡ ಯತ್ನಾಳ್, ಕೆಲವು ಸಮುದಾಯದವರಿಗೆ ಗಣಪತಿ ಹಬ್ಬದ ಸಂಭ್ರಮಾಚರಣೆ ಸಹಿಸಲು ಆಗುವುದಿಲ್ಲ. ಅಂಥವರು ಗಾಂಧಿ- ನೆಹರೂ ಸೇರಿ ಮಾಡಿರುವ ಪಾಕಿಸ್ತಾನಕ್ಕೆ ಹೋಗಬಹುದು. ಮೋದಿ, ಯೋಗಿ ಇರೋವರೆಗೂ ನೀವು ಇಲ್ಲಿ ಬಾಲ ಬಿಚ್ಚಲು ಸಾಧ್ಯವಿಲ್ಲ ಎಂದರು.

- Advertisement -

ದೇಶದಲ್ಲಿ ಎಲ್ಲೆಲ್ಲಿ ಕಾಂಗ್ರೆಸ್ ಸರ್ಕಾರ ಇದೆಯೋ ಅಲ್ಲೆಲ್ಲ ಹಿಂದೂಗಳ ಮೇಲೆ ದಬ್ಬಾಳಿಕೆ ನಡೆಯುತ್ತಿವೆ. ದೇಶದಲ್ಲಿ ಹಿಂದೂಗಳು ಹೇಳಿದಂತೆ ದೇಶ ನಡೆಯಬೇಕು. ಮುಸ್ಲಿಮರ ಮಸೀದಿ ಮುಂದೆ ಡ್ಯಾನ್ಸ್ ಮಾಡಬಾರದು, ಹಾಡು ಹಾಡಬಾರದು ಅಂದರೆ ಅವರಿಗಾಗಿ ಪ್ರತ್ಯೇಕವಾಗಿ ಪಾಕಿಸ್ತಾನ, ಬಾಂಗ್ಲಾದೇಶ ಇವೆ. ಅಲ್ಲಿಗೆ ಹೋಗಲಿ ಎಂದರು.

ಕಾಂಗ್ರೆಸ್​ನವರ ಕಾರಣದಿಂದ ಬಾಂಗ್ಲಾ ದೇಶದಂತೆ ಇಲ್ಲಿಯೂ ದಂಗೆ ಆಗುತ್ತದೆ. ಪಶ್ವಿಮ‌ ಬಂಗಾಳದಲ್ಲಿ ದೆವ್ವವೊಂದು ಅಧಿಕಾರದಲ್ಲಿದೆ ಎಂದು ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಅವರು ಮುಸ್ಲಿಂ‌ ಜಾತಿಯಲ್ಲಾದರೂ ಹುಟ್ಟಬೇಕಿತ್ತು. ಪಶ್ಚಿಮ ಬಂಗಾಳದಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆಗಿ‌ ಕೊಲೆಯಾದರೂ ಮಹಿಳೆಯಾಗಿರೋ ಆ ಮುಖ್ಯಮಂತ್ರಿ ಮರುಕ ವ್ಯಕ್ಯಪಡಿಸಲಿಲ್ಲ ಎಂದು ಟೀಕಿಸಿದ್ದಾರೆ.

ಸಿಎಂ ಸ್ಥಾನದಿಂದ ಸಿದ್ದರಾಮಯ್ಯನವರನ್ನು ಇಳಿಸಿದರೆ ಪ್ರಧಾನಿ ನರೇಂದ್ರ ಮೋದಿಯವರ ಮನೆಗೆ ಹೋಗುತ್ತೇವೆ ಎಂದು ರೋಣ ಶಾಸಕ ಹೇಳುತ್ತಾರೆ. ಈ ಕಾಂಗ್ರೆಸ್​ನವರಿಗೆ ಮೋದಿ ಮನೆಗೆ ಹೋಗಲು ಅಸಾಧ್ಯ. ಅವರ ಸುತ್ತ ಸೈನ್ಯ ಇದೆ, ಪೊಲೀಸ್ ಇಲಾಖೆಯಿದೆ. ಭಾರತದಲ್ಲಿ ಜೀವಂತ ಹಿಂದೂಗಳಿದ್ದಾರೆ. ಪ್ರಧಾನಿ ಮೋದಿ ಮನೆಗೆ ನುಗ್ಗಿದರೆ ಕಾಂಗ್ರೆಸ್‌ನವರು ಯಾರೂ ಉಳಿಯಲ್ಲ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ ಕಾರಿದ್ದಾರೆ.



Join Whatsapp
Exit mobile version