ಸಂಸತ್ ಸಮಿತಿ ತನಿಖೆಯ ಕಹಿಯಲ್ಲಿರುವ ಮಹುವಾ ಮೊಯಿತ್ರಾಗೆ ಹೊಸ ಜವಾಬ್ದಾರಿಯ ಸಿಹಿ ನೀಡಿದ ಮಮತಾ ಬ್ಯಾನರ್ಜಿ

Prasthutha|

ಕೋಲ್ಕತ್ತಾ: ‘ಹಣಕ್ಕಾಗಿಪ್ರಶ್ನೆ’ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆಯ ನೈತಿಕ ಸಮಿತಿಯಿಂದ ಸಂಸತ್‌ನಿಂದ ಉಚ್ಚಾಟನೆಗೆ ಶಿಫಾರಸು ಎದರಿಸುತ್ತಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರ ಬೆಂಬಲಕ್ಕೆ ಪಕ್ಷ ನಿಂತಿದೆ. ಕೃಷ್ಣನಗರ(ನಾಡಿಯಾ ಉತ್ತರ) ಜಿಲ್ಲಾದ್ಯಕ್ಷೆಯನ್ನಾಗಿ ಮಾಡಿದೆ. 2024 ರ ಸಾರ್ವತ್ರಿಕ ಚುನಾವಣೆಗೆ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಮಾಡಲು ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

- Advertisement -

ಟಿಎಂಸಿ ಇಂದು ರಾಜ್ಯದ 35 ಜಿಲ್ಲೆಗಳ ಜಿಲ್ಲಾಧ್ಯಕ್ಷರ ಪರಿಷ್ಕೃತ ಪಟ್ಟಿಯನ್ನು ಪ್ರಕಟಿಸಿದ್ದು, ಕೃಷ್ಣನಗರ ಜಿಲ್ಲಾಧ್ಯಕ್ಷರಾಗಿ ಮಹುವಾ ಮೊಯಿತ್ರಾ ಅವರನ್ನು ನೇಮಕ ಮಾಡಲಾಗಿದೆ. ಅವರು ಕೆಲವು ವರ್ಷಗಳ ಹಿಂದೆ ಕೃಷ್ಣಾನಗರ ಜಿಲ್ಲಾಧ್ಯಕ್ಷರಾಗಿದ್ದ ಕಾರ್ಯನಿರ್ವಹಿಸಿದ್ದರು.

ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮಹುವಾ ಮೊಯಿತ್ರಾ , ನನ್ನನ್ನು ಕೃಷ್ಣನಗರ(ನಾಡಿಯಾ ಉತ್ತರ) ಜಿಲ್ಲಾಧ್ಯಕ್ಷರನ್ನಾಗಿ ನೇಮಿಸಿದ್ದಕ್ಕಾಗಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತು ಟಿಎಂಸಿಗೆ ಧನ್ಯವಾದಗಳು. ಕೃಷ್ಣನಗರದ ಜನರಿಗಾಗಿ ಪಕ್ಷದೊಂದಿಗೆ ಯಾವಾಗಲೂ ಕೆಲಸ ಮಾಡುತ್ತೇನೆ ಎಂದು ಬರೆದಿದ್ದಾರೆ.

Join Whatsapp