ಮಂಗಳೂರು: ಕಾಮಗಾರಿ ವೇಳೆ ಮಣ್ಣು ಕುಸಿತ; ಓರ್ವ ಕಾರ್ಮಿಕ ಮೃತ್ಯು

Prasthutha|

ಮಂಗಳೂರು: ನಗರದ ಬಲ್ಮಠ ಪ್ರದೇಶದಲ್ಲಿ ಕಾಮಗಾರಿ ವೇಳೆ ಭೂಕುಸಿತಗೊಂಡು ಮಣ್ಣಿನಲ್ಲಿ ಸಿಲುಕಿದ್ದ ಇಬ್ಬರು ಕಾರ್ಮಿಕರ ಪೈಕಿ ಓರ್ವ ಸಾವನ್ನಪ್ಪಿದ್ದಾರೆ.

- Advertisement -

ಚಂದನ್ ಕುಮಾರ್ ಮೃತ ಕಾರ್ಮಿಕ. ಮೂಲತಃ ಉತ್ತರ ಪ್ರದೇಶ ಮೂಲದವರು.

ಸತತ ಆರೂವರೆ ಗಂಟೆ ಕಾರ್ಯಾಚರಣೆ ನಡೆಸಿ ಚಂದನ್ ಕುಮಾರ್​ನನ್ನು ಹೊರತೆಗೆಯಲು ರಕ್ಷಣಾ ತಂಡ ಹರಸಾಹಸ ಪಟ್ಟಿತ್ತು. ಆದರೆ ರಾಡ್, ಮಣ್ಣು, ಹಲಗೆಯ ನಡುವೆ ಸಿಲುಕಿಕೊಂಡಿದ್ದರಿಂದ ಕಾರ್ಮಿಕ ಅಷ್ಟರಲ್ಲಿ ಉಸಿರು ಚೆಲ್ಲಿದ್ದಾರೆ.

- Advertisement -

Join Whatsapp