ಭಯೋತ್ಪಾದಕ ಸಂಘಟನೆಗಳ ಜೊತೆ ಸಂಪರ್ಕ ಹೊಂದಿದ್ದ ವ್ಯಕ್ತಿಯ ಬಂಧನ: ಗೃಹ ಸಚಿವ

Prasthutha|

ಬೆಂಗಳೂರು: ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳ ಜತೆ ಸಂಪರ್ಕ ಹೊಂದಿರುವ ಖಚಿತ ಮಾಹಿತಿ ಮೇರೆಗೆ ರಾಜ್ಯ ಪೊಲೀಸರು ಒಬ್ಬ ವ್ಯಕ್ತಿಯನ್ನು ಇಂದು ಮುಂಜಾನೆ ವಶಕ್ಕೆ ಪಡೆದಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

- Advertisement -


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಪೊಲೀಸರು ಕೇಂದ್ರದ ಬೇಹುಗಾರಿಕೆ ಸಂಸ್ಥೆಯ ಅಧಿಕಾರಿಗಳ ಸಹಯೋಗದಿಂದ ಈ ಆರೋಪಿಯನ್ನು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸಿದ್ದಾರೆ ಎಂದರು.


ಆಪಾದಿತ ಆರೀಫ್ ಎಂಬಾತ ವಿದೇಶ ಪ್ರಯಾಣಕ್ಕೆ ತಯಾರಿ ನಡೆಸಿದ್ದ ಎಂದೂ ಹೇಳಲಾಗಿದ್ದು, ಅಷ್ಟರಲ್ಲಿಯೇ, ಪೊಲೀಸರು, ವಶಕ್ಕೆ ಪಡೆದಿದ್ದು, ಪೊಲೀಸರ ಕ್ರಮವನ್ನು ಅಭಿನಂದಿಸುತ್ತೇನೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

- Advertisement -


ದೇಶದಲ್ಲಿ ಕೋಮು ಭಾವನೆ ಕೆರಳಿಸಿ ಅಸ್ಥಿರತೆ ಉಂಟು ಮಾಡುತ್ತಿರುವ ಸಂಘಟನೆಗಳೂ ಹಾಗೂ ಅವುಗಳ ಸಂಪರ್ಕ ಹೊಂದಿರುವ ವ್ಯಕ್ತಿಗಳ ಬಗ್ಗೆ ಸದಾ ಕಣ್ಗಾವಲು ಇರಿಸಿದ್ದು, ಭಾರತವನ್ನು ದುರ್ಬಲಗೊಳಿಸುವ ಎಲ್ಲಾ ಪ್ರಯತ್ನಗಳನ್ನು, ಹತ್ತಿಕ್ಕಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

Join Whatsapp