ಭಯೋತ್ಪಾದಕ ಸಂಘಟನೆಗಳ ಜೊತೆ ಸಂಪರ್ಕ ಹೊಂದಿದ್ದ ವ್ಯಕ್ತಿಯ ಬಂಧನ: ಗೃಹ ಸಚಿವ

Prasthutha|

ಬೆಂಗಳೂರು: ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳ ಜತೆ ಸಂಪರ್ಕ ಹೊಂದಿರುವ ಖಚಿತ ಮಾಹಿತಿ ಮೇರೆಗೆ ರಾಜ್ಯ ಪೊಲೀಸರು ಒಬ್ಬ ವ್ಯಕ್ತಿಯನ್ನು ಇಂದು ಮುಂಜಾನೆ ವಶಕ್ಕೆ ಪಡೆದಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

- Advertisement -


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಪೊಲೀಸರು ಕೇಂದ್ರದ ಬೇಹುಗಾರಿಕೆ ಸಂಸ್ಥೆಯ ಅಧಿಕಾರಿಗಳ ಸಹಯೋಗದಿಂದ ಈ ಆರೋಪಿಯನ್ನು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸಿದ್ದಾರೆ ಎಂದರು.


ಆಪಾದಿತ ಆರೀಫ್ ಎಂಬಾತ ವಿದೇಶ ಪ್ರಯಾಣಕ್ಕೆ ತಯಾರಿ ನಡೆಸಿದ್ದ ಎಂದೂ ಹೇಳಲಾಗಿದ್ದು, ಅಷ್ಟರಲ್ಲಿಯೇ, ಪೊಲೀಸರು, ವಶಕ್ಕೆ ಪಡೆದಿದ್ದು, ಪೊಲೀಸರ ಕ್ರಮವನ್ನು ಅಭಿನಂದಿಸುತ್ತೇನೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

- Advertisement -


ದೇಶದಲ್ಲಿ ಕೋಮು ಭಾವನೆ ಕೆರಳಿಸಿ ಅಸ್ಥಿರತೆ ಉಂಟು ಮಾಡುತ್ತಿರುವ ಸಂಘಟನೆಗಳೂ ಹಾಗೂ ಅವುಗಳ ಸಂಪರ್ಕ ಹೊಂದಿರುವ ವ್ಯಕ್ತಿಗಳ ಬಗ್ಗೆ ಸದಾ ಕಣ್ಗಾವಲು ಇರಿಸಿದ್ದು, ಭಾರತವನ್ನು ದುರ್ಬಲಗೊಳಿಸುವ ಎಲ್ಲಾ ಪ್ರಯತ್ನಗಳನ್ನು, ಹತ್ತಿಕ್ಕಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

Join Whatsapp
Exit mobile version