ತಿರಂಗದಿಂದ ಬೈಕ್ ಒರೆಸಿದ ವ್ಯಕ್ತಿಯ ಬಂಧನ: ಬೈಕ್ ವಶಪಡಿಸಿಕೊಂಡ ಪೊಲೀಸರು

Prasthutha|

ನವದೆಹಲಿ: ತನ್ನ ಸ್ಕೂಟರ್ ಅನ್ನು ಸ್ವಚ್ಛಗೊಳಿಸಲು ತ್ರಿವರ್ಣ ಧ್ವಜ ಬಳಸಿದ ಆರೋಪದ ಮೇಲೆ 52 ವರ್ಷದ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದು, ಬೈಕ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -

ಈಶಾನ್ಯ ದೆಹಲಿಯ ಭಜನ್ ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ವ್ಯಕ್ತಿಯು ತನ್ನ ಸ್ಕೂಟರ್ ಅನ್ನು ತಿರಂಗದಿಂದ ಸ್ವಚ್ಛಗೊಳಿಸುವ ವೀಡಿಯೊ ಸಾಮಾಜಿಕ ವಲಯದಲ್ಲಿ ವೈರಲ್ ಆದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯನ್ನು ಸ್ಥಳೀಯರು ತಮ್ಮ ಫೋನ್ ಗಳಲ್ಲಿ ರೆಕಾರ್ಡ್ ಮಾಡಿದ್ದರು ಮತ್ತು ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಗಳಲ್ಲಿ ಅಪ್ಲೋಡ್ ಮಾಡಿದ್ದರು.

ಈ ವಿಷಯದಲ್ಲಿ, ಕಾನೂನು ಕ್ರಮವನ್ನು ಪ್ರಾರಂಭಿಸಲಾಗಿದೆ ಮತ್ತು ಬಜನ್ಪುರ ಪೊಲೀಸ್ ಠಾಣೆಯಲ್ಲಿ ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ಕಾಯ್ದೆ, 1971 ರ ಸೆಕ್ಷನ್ 2 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ತಾನು ಉದ್ದೇಶಪೂರ್ವಕವಾಗಿ ಮಾಡಿದ್ದಲ್ಲ , ಕಣ್ತಪ್ಪಿನಿಂದ ಇದು ಸಂಭವಿಸಿದೆ ಎಂದು ಆರೋಪಿ ಹೇಳಿದ್ದು ನ್ಯಾಯಾಲಯದ ವಿಚಾರಣೆಗೆ ಆತ ಹಾಜರಾಗುವಂತೆ ಆದೇಶಿಸಲಾಗಿದೆ ಎಂದು ಪೊಲೀಸರು ಹೇಳಿದರು.

- Advertisement -

ಸ್ಕೂಟರ್ ಅನ್ನು ಸ್ವಚ್ಛಗೊಳಿಸಲು ಅವರು ಬಳಸಿದ ಸ್ಕೂಟರ್ ಮತ್ತು ಧ್ವಜವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.



Join Whatsapp