ಕೌಟುಂಬಿಕ ಕಲಹ: ಪತ್ನಿಯ ಕತ್ತು ಸೀಳಿ ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ!

Prasthutha|

ಆನೇಕಲ್: ಪತಿಯೊಬ್ಬ ಚಾಕುವಿನಿಂದ ಪತ್ನಿಯ ಕತ್ತು ಸೀಳಿ ಕೊಲೆ ಮಾಡಿ, ಬಳಿಕ ತಾನೂ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ತಾಲೂಕಿನ ಯಡವನಹಳ್ಳಿಯಲ್ಲಿ ನಡೆದಿದೆ.

- Advertisement -

ಆನೇಕಲ್ ತಾಲೂಕಿನ ಯಡವನಹಳ್ಳಿಯಲ್ಲಿ ಮುಂಜಾನೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಬೆಳ್ಳಂಬೆಳಗ್ಗೆ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಮನೆಯಲ್ಲಿ ಮಲಗಿದ್ದಾಗ ಪತ್ನಿ ಲಾವಣ್ಯ (30) ಳನ್ನು ಪತಿ ಸಂಪತ್ ಚಾಕುವಿನಿಂದ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ. ಆಗ ಅಡ್ಡ ಬಂದ ಮಗನಿಗೂ ಚಾಕುವಿನಿಂದ ಇರಿದಿದ್ದು, 10 ವರ್ಷದ ಬಾಲಕ ಬಾರ್ಗವ್ ಕೈಗೆ ಗಾಯವಾಗಿದೆ.

ಪತ್ನಿ ಕೊಂದ ಬಳಿಕ ಸಂಪತ್ ತಾನೂ ಕತ್ತು ಕುಯ್ದುಕೊಂಡು ಮನೆಯ ಮೊದಲನೇ ಮಹಡಿಯಿಂದ ಹೊರಗೆ ಓಡಿ ಬಂದಿದ್ದಾನೆ. ಮನೆಯ ಎದುರಿನ ಚರಂಡಿ ಬಳಿ ಬಿದ್ದು ಒದ್ದಾಡುತ್ತಿದ್ದ ಸಂಪತ್ನನ್ನು ಕಂಡ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.



Join Whatsapp