ತ್ರಿಪುರಾ: ದನ ಕಳ್ಳತನ ಆರೋಪ ಹೊರಿಸಿ ವ್ಯಕ್ತಿಯ ಹತ್ಯೆ

Prasthutha|

ಅಗರ್ತಲಾ: ತ್ರಿಪುರಾದ ಸೋನಮುರಾದ ಕಮಲನಗರದಲ್ಲಿ ಅಪರಿಚಿತ ಮುಸ್ಲಿಮ್ ವ್ಯಕ್ತಿಯೊಬ್ಬನನ್ನು ದನ ಕಳ್ಳತನದ ಆರೋಪದಲ್ಲಿ ಸಂಘಪರಿವಾರದ ಗುಂಪೊಂದು ಥಳಿಸಿ ಹತ್ಯೆ ಮಾಡಿದೆ.

- Advertisement -

ಮೃತ ವ್ಯಕ್ತಿಯನ್ನು ಪತ್ತೆಹಚ್ಚಲಾಗುತ್ತಿದ್ದು, ಆತನ ಬಳಿಯಿಂದ ಮೊಬೈಲ್ ಫೋನ್ ಮತ್ತು ಇನ್ನಿತರ ದಾಖಲೆಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಕುರಿತು ಪ್ರತಿಕ್ರಿಯಿಸಿದ ಸ್ಥಳೀಯ ನಿವಾಸಿಗಳು ಮೃತ ವ್ಯಕ್ತಿಯನ್ನು ಬಾಂಗ್ಲಾದೇಶ ಮೂಲದ ಜಾಮ್ ನಗರದವನಾಗಿದ್ದು, ಕಳ್ಳತನದ ಶಂಕೆಯಿಂದ ಹತ್ಯೆ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ. ಮೃತ ವ್ಯಕ್ತಿಯಿಂದ ಬಾಂಗ್ಲಾದೇಶದ ಕರೆನ್ಸಿ, ಮೊಬೈಲ್ ಸೆಟ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ.

- Advertisement -

ದನ ಕಳ್ಳತನದ ಆರೋಪದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಯುವಕನನ್ನು ಹೊಡೆದು ಕೊಂದಿದ್ದಾರೆ. ಸ್ಥಳದಲ್ಲಿದ್ದ ಇನ್ನಿಬ್ಬರು ಯುವಕರು ಹಲ್ಲೆಕೋರರಿಂದ ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.



Join Whatsapp