ಶ್ರೀನಗರ ಮಾರುಕಟ್ಟೆಯಲ್ಲಿ ಗ್ರೇನೇಡ್ ದಾಳಿಗೆ ಓರ್ವ ಸಾವು, 20ಕ್ಕೂ ಅಧಿಕ ಮಂದಿಗೆ ಗಾಯ

Prasthutha|

ಶ್ರೀನಗರ: ಶ್ರೀನಗರದ ಮಾರುಕಟ್ಟೆಯಲ್ಲಿ ನಡೆದ ಗ್ರೇನೇಡ್ ದಾಳಿಗೆ ಓರ್ವ ಮೃತಪಟ್ಟು, ಹಲವು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

- Advertisement -

ಭಾನುವಾರ ಸಾಯಂಕಾಲ 4.20ರ ವೇಳೆಗೆ ಮಾರುಕಟ್ಟೆಯಲ್ಲಿ ಭಯೋತ್ಪಾದಕರ ಏಕಾಏಕಿ ಗ್ರೇನೇಡ್ ದಾಳಿ ನಡೆದಿದೆ ಎಂದು ವರದಿಗಳು ತಿಳಿಸಿವೆ. ವಾರಾಂತ್ಯ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಮಾರುಕಟ್ಟೆಯಲ್ಲಿ ಸೇರಿದ್ದರು. ಇದೇ ಸಮಯ ಸ್ಥಳದಲ್ಲಿದ್ದ ಪೊಲೀಸ್ ಹಾಗೂ ಭದ್ರತಾ ಸಿಬ್ಬಂದಿಗಳನ್ನು ಗುರಿಯಾಗಿಸಿ ಗ್ರೇನೇಡ್ ದಾಳಿ ನಡೆದಿದೆ ಎನ್ನಲಾಗಿದೆ.

ಘಟನೆಯಿಂದ ಮೊಹಮ್ಮದ್ ಅಸ್ಲಾಂ ಮಖ್ದೂಮಿ (71) ಸ್ಥಳದಲ್ಲೇ ಮೃತಪಟ್ಟಿದ್ದಾರೆ. 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾಗಿ ತಿಳಿದು ಬಂದಿದೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿ ರಾಕೇಶ್ ಬಲ್ವಾಲ್ ತಿಳಿಸಿದ್ದಾರೆ.

- Advertisement -

ಘಟನೆಯಲ್ಲಿ ಪೊಲೀಸ್ ಸಿಬ್ಬಂದಿಗಳಿಗೂ ಗಾಯಗಳಾಗಿವೆ.    



Join Whatsapp