ಮಂಗಳೂರು | ಸಿಮೆಂಟ್ ಮೇಲೆ ಕಾರು ಚಲಾಯಿಸಿದ್ದಕ್ಕೆ ಚೂರಿಯಿಂದ ಇರಿದು ಕೊಲೆ..!

Prasthutha|

ಮಂಗಳೂರು: ಸಿಮೆಂಟ್ ಹಾಕಿದ ರಸ್ತೆಯಲ್ಲಿ ಕಾರು ಚಲಾಯಿಸಿದ್ದಕ್ಕೆ ವಾಗ್ವಾದ ನಡೆದು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ರಥಬೀದಿಯ ವೀರವೆಂಕಟೇಶ ಅಪಾರ್ಟ್ ಮೆಂಟ್ ನಲ್ಲಿ ಘಟನೆ ನಡೆದಿದ್ದು, ಮೃತ ವ್ಯಕ್ತಿಯನ್ನು ವಿನಾಯಕ್ ಕಾಮತ್(44) ಎಂದು ಗುರುತಿಸಲಾಗಿದೆ.

- Advertisement -

ಕೊಲೆಗೈದ ಆರೋಪಿಗಳ ದುಷ್ಕ್ರತ್ಯಗಳು ಫ್ಲಾಟ್ನ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ. ವೀರವೆಂಕಟೇಶ ಅಪಾರ್ಟ್ ಮೆಂಟ್ ನಿವಾಸಿಗಳಾದ ಕೃಷ್ಣಾನಂದ ಕಿಣಿ ಮತ್ತು ಆತನ ಪುತ್ರ ಅವಿನಾಶ್ ಕಿಣಿಯಿಂದ ಕೃತ್ಯವೆಸಗಿದ ಆರೋಪಿಗಳಾಗಿದ್ದಾರೆ. ಸಿಮೆಂಟ್ ಹಾಕಿದ ರಸ್ತೆಯಲ್ಲಿ ಕಾರು ಚಲಾವಣೆ ಮಾಡಿದ್ದಕ್ಕಾಗಿ ವಿನಾಯಕ್ ಕಾಮತ್ ಜೊತೆ ಕೃಷ್ಣಾನಂದ ಕಿಣಿ ಮತ್ತು ಆತನ ಪುತ್ರ ಅವಿನಾಶ್ ಕಿಣಿ ಜಗಳವಾಡಿದ್ದಾರೆ. ಜಗಳ ವಿಕೋಪಕ್ಕೆ ತೆರಳಿ ವಿನಾಯಕ್ ಕಾಮತ್‍ಗೆ ಚಾಕುವಿನಿಂದ ಇರಿದಿದ್ದಾರೆ. ಚಿಕಿತ್ಸೆ ಫಲಾಕಾರಿಯಾಗದೇ ವಿನಾಯಕ್ ಕಾಮತ್ ಕೊನೆಯುಸಿರೆಳೆದಿದ್ದಾರೆ.

- Advertisement -

ಘಟನೆಗೆ ಸಂಬಂಧಿಸಿದಂತೆ ಮಂಗಳೂರಿನ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Join Whatsapp