ಕೇಂದ್ರ ಸಚಿವ ಕೌಶಲ್ ಕಿಶೋರ್ ಮನೆಯಲ್ಲಿ ಯುವಕನ ಗುಂಡಿಕ್ಕಿ ಹತ್ಯೆ

Prasthutha|

ಲಕ್ನೋ: ಕೇಂದ್ರ ಸಚಿವ ಕೌಶಲ್ ಕಿಶೋರ್ ಮನೆಯಲ್ಲಿ ಗುಂಡಿನ ಸದ್ದು ಕೇಳಿಬಂದಿದೆ. ಸಚಿವರ ಮಗನ ಸ್ನೇಹಿತ ವಿನಯ್ ಶ್ರೀವಾಸ್ತವ ಎಂಬ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

- Advertisement -

 ಲಕ್ನೋದ ಠಾಕುರ್‌ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಬೆಗಾರಿಯಾ ಗ್ರಾಮದಲ್ಲಿರುವ ಕೇಂದ್ರ ರಾಜ್ಯ ಸಚಿವ ಕೌಶಲ್ ಕಿಶೋರ್ ಅವರ ಹೊಸ ನಿವಾಸದಲ್ಲಿ ವಿನಯ್ ಶ್ರೀವಾಸ್ತವ್ ಅವರನ್ನು ಪಿಸ್ತೂಲ್‌ನಿಂದ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಪರಿಶೀಲನೆ ನಡೆಯುತ್ತಿದೆ.

ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ವಿನಯ್ ಶ್ರೀವಾಸ್ತವ್ ಅವರ ಕುಟುಂಬಸ್ಥರು ಕೊಲೆ ಆರೋಪದಡಿ ದೂರು ದಾಖಲಿಸಿದ್ದಾರೆ. ಪಶ್ಚಿಮ ಡಿಸಿಪಿ ರಾಹುಲ್ ರಾಜ್, ಎಡಿಸಿಪಿ ಚಿರಂಜೀವ್ ನಾಥ್ ಸಿನ್ಹಾ ನೇತೃತ್ವದಲ್ಲಿ ಸ್ಥಳದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್​ ಕಲ್ಪಿಸಲಾಗಿದೆ.

Join Whatsapp