ಪ್ರೀತಿ ನಿರಾಕರಣೆ: ಯುವತಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಯುವಕ

Prasthutha|

ಕೊಪ್ಪಳ: ಯುವತಿ ಪ್ರೀತಿಸಲು ನಿರಾಕರಿಸಿದ್ದಕ್ಕೆ ಯವಕನೋರ್ವ ಆಕೆಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬಳಗೇರಿ ಗ್ರಾಮದಲ್ಲಿ ನಡೆದಿದೆ.

- Advertisement -


ಮೃತ ಯುವತಿಯನ್ನು ಸುಮಾ ತೋಟದ (17) ಎಂದು ಗುರುತಿಸಲಾಗಿದ್ದು, ಅದೇ ಗ್ರಾಮದ ಮೃತ ಯುವಕ ಪ್ರಕಾಶ್ ಭಜಂತ್ರಿ ಆಕೆಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪ್ರಕಾಶ್ ಸುಮಾಳನ್ನು ಪ್ರೀತಿಸುವಂತೆ ಒತ್ತಾಯ ಮಾಡುತ್ತಿದ್ದ. ಆದರೆ ಸುಮಾ ಪ್ರೀತಿ ನಿರಾಕರಿಸಿದ್ದಳು ಎನ್ನಲಾಗಿದೆ.


ಈ ಬಗ್ಗೆ ಕುಕನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp