Home ಟಾಪ್ ಸುದ್ದಿಗಳು ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧದ ಮುಂದೆ ಬೈಕ್‌ ಗೆ ಬೆಂಕಿ ಇಟ್ಟ ಸವಾರ

ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧದ ಮುಂದೆ ಬೈಕ್‌ ಗೆ ಬೆಂಕಿ ಇಟ್ಟ ಸವಾರ

ಬೆಂಗಳೂರು: ಪೊಲೀಸರ ಮೇಲಿನ ಕೋಪಕ್ಕೆ ಸವಾರನೊಬ್ಬ ವಿಧಾನಸೌಧದ ಮುಂದೆ ತನ್ನ ಬೈಕ್‌ಗೆ ಬೆಂಕಿ ಹಚ್ಚಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಚಳ್ಳಕೆರೆ ಮೂಲದ ಪೃಥ್ವಿರಾಜ್ ಎಂಬಾತ ಈ ಕೃತ್ಯ ಎಸಗಿದ್ದಾನೆ. ಬೈಕ್‌ಗೆ ಬೆಂಕಿ ಹಚ್ಚಿದ ಪರಿಣಾಮ ಪೊಲೀಸರ ಮುಂದೆಯೇ ಬೈಕ್ ಸುಟ್ಟು ಕರಕಲಾಗಿದೆ.

ಬೆಂಕಿ ಹಚ್ಚಲು ಕಾರಣವೇನು?

ಚಳ್ಳಕೆರೆ ಮೂಲದ ಪೃತ್ವಿರಾಜ್ ಎಂಬ ಯುವಕ ಟ್ರಕ್ಕಿಂಗ್ ಹೋಗಿ ಮಿಸ್ಸಾಗಿದ್ದ. ಈ ಹಿನ್ನಲೆ ಗಾಬರಿಗೊಂಡ ಆತನ ತಾಯಿ ಚಳ್ಳಕೆರೆ ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ ಪೊಲೀಸರು ಪೃಥ್ವಿ ತಾಯಿಯನ್ನ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನಲೆ ನನ್ನ ತಾಯಿಯನ್ನು ಬೈದಿದ್ದಕ್ಕೆ ಬೇಸರಗೊಂಡ  ಪೃತ್ವಿರಾಜ್,  ವಿಧಾನಸೌಧದ ಮುಂದೆಯೇ ಬೈಕ್​ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾನೆ.

Join Whatsapp
Exit mobile version