Home ಟಾಪ್ ಸುದ್ದಿಗಳು ಸುಪ್ರೀಂ ಕೋರ್ಟ್ ಮುಂಭಾಗ ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನ

ಸುಪ್ರೀಂ ಕೋರ್ಟ್ ಮುಂಭಾಗ ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನ

ಹೊಸದಿಲ್ಲಿ: ಸುಪ್ರೀಂ ಕೋರ್ಟ್ ಮುಂಭಾಗದಲ್ಲಿ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

ನೋಯ್ಡಾ ನಿವಾಸಿ ರಾಜ್ಭರ್ ಗುಪ್ತಾ (50) ಆತ್ಮಹತ್ಯೆಗೆ ಯತ್ನಿಸಿದ್ದಾನೆಂದು ಪೊಲೀಸರು ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ANI ವರದಿ ಮಾಡಿದೆ.

ತೀವ್ರ ಸುಟ್ಟಗಾಯಗಳಾಗಿದ್ದ ಅವನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆತ್ಮಹತ್ಯೆಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಘಟನೆಯ ಕುರಿತು ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Join Whatsapp
Exit mobile version