ಉತ್ತರಪ್ರದೇಶದ ಮಸೀದಿಯಲ್ಲಿ ನಮಾಝ್ ನಿರ್ವಹಿಸುತ್ತಿದ್ದ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

Prasthutha|

ಲಕ್ನೋ: ಉತ್ತರಪ್ರದೇಶದ ಮಸೀದಿಯಲ್ಲಿ ನಮಾಝ್ ನಿರ್ವಹಿಸುತ್ತಿದ ವೇಳೆಯಲ್ಲಿ ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಚಿಲಿಯಾ ಪ್ರದೇಶದ ಕೊಲುವಾ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

- Advertisement -

ಬೆಳಗ್ಗಿನ ನಮಾಝ್ ಮುಗಿಸಿ ಮಸೀದಿಯಲ್ಲಿ ಕುರ್ಆನ್ ಓದುತ್ತಿದ್ದಾಗ ಅಪರಿಚಿತ ದುಷ್ಕರ್ಮಿಗಳ ತಂಡ ಕಮರುಝಮ ಎಂಬವರ ಮೇಲೆ ಗುಂಡು ಹಾರಿಸಿ ಹತ್ಯೆ ನಡೆಸಿದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸುರೇಶ್ ಚಂದ್ ರಾವತ್ ತಿಳಿಸಿದ್ದಾರೆ.

ಪೊಲೀಸರು ಸ್ಥಳಕ್ಕಾಗಮಿಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪ್ರಕರಣ ದಾಖಲಿಸಿದ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

Join Whatsapp