ನ್ಯಾಯಾಲಯದ ಆವರಣದಲ್ಲೇ ಪತ್ನಿಯ ಕತ್ತು ಕೊಯ್ದು ಕೊಲೆ ಮಾಡಿದ ಪತಿ

Prasthutha|

ಹಾಸನ: ನ್ಯಾಯಾಲಯದ ಆವರಣದಲ್ಲೇ ಪಾಪಿ ಪತಿಯೊಬ್ಬ ಹಾಡಹಗಲೇ ತನ್ನ ಪತ್ನಿಯ ಕತ್ತು ಕೊಯ್ದು ಹತ್ಯೆ ಮಾಡಿದ ದಾರುಣ ಘಟನೆ ಹಾಸನದಲ್ಲಿ ನಡೆದಿದೆ.

- Advertisement -


ತಟ್ಟೆಕೆರೆ ಗ್ರಾಮದ ನಿವಾಸಿ ಚೈತ್ರಾ ಹತ್ಯೆಗೀಡಾದವರು.


ಚೈತ್ರಾ ಜೀವನಾಂಶ ಕೋರಿ ಹೊಳೆನರಸೀಪುರದ ಕೋರ್ಟ್ ಮೆಟ್ಟಿಲೇರಿದ್ದರು. ಅದರಂತೆ ವಿಚಾರಣೆಗೆ ಹಾಜರಾಗುವ ವೇಳೆ ಚೈತ್ರಾ ಪತಿ ಶಿವಕುಮಾರ್ ಆಕೆಯ ಕತ್ತು ಕೊಯ್ದು ಹತ್ಯೆ ಮಾಡಲು ಯತ್ನಿಸಿದ್ದಾನೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಚೈತಾಳನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೆ ಆಕೆ ಸಾವನ್ನಪ್ಪಿದ್ದಾಳೆ.

- Advertisement -


ಹೊಳೆನರಸೀಪುರ ತಾಲ್ಲೂಕಿನ ತಟ್ಟೆಕೆರೆ ಗ್ರಾಮದ ಚೈತ್ರಾ ಮತ್ತು ಶಿವಕುಮಾರ್ ನಡುವೆ ಕೌಟುಂಬಿಕ ಕಲಹ ಏರ್ಪಟ್ಟಿದ್ದ ಹಿನ್ನೆಲೆ ಪತಿಯ ವಿರುದ್ಧ ಚೈತ್ರಾ ಜೀವನಾಂಶ ಕೋರಿ ಹೊಳೆನರಸೀಪುರ ಟೌನ್ ಠಾಣೆ ಪೊಲೀಸ್ ವ್ಯಾಪ್ತಿಯಲ್ಲಿ ಇರುವ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ತನ್ನ ವಿರುದ್ಧವೇ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಕ್ಕೆ ಶಿವಕುಮಾರ್ ಪತ್ನಿಯ ವಿರುದ್ಧ ಕೋಪಗೊಂಡಿದ್ದ. ಇದನ್ನು ಲೆಕ್ಕಿಸದೆ ಚೈತ್ರಾ ನ್ಯಾಯಾಲಯಕ್ಕೆ ಹೋಗಿದ್ದಾಳೆ. ಈ ವೇಳೆ ಶಿವಕುಮಾರ್ ಆಕೆಯ ಹತ್ಯೆಗೆ ಆವರಣದಲ್ಲೇ ಹೊಂಚುಹಾಕಿ ಕುಳಿತಿದ್ದನು ಎನ್ನಲಾಗಿದೆ.


ಈ ಬಗ್ಗೆ ಅರಿವಿಲ್ಲದೆ ಚೈತ್ರಾ ಇಂದು ನ್ಯಾಯಾಲಯಕ್ಕೆ ಆಗಮಿಸಿದ್ದಾಳೆ. ಸ್ವಲ್ಪ ಹೊತ್ತಿನ ಬಳಿಕ ಚೈತ್ರಾ ಶೌಚಾಲಯಕ್ಕೆ ತೆರಳಿದ್ದಾಳೆ. ಅಲ್ಲಿ ಆಕೆಗಾಗಿ ಕಾದು ಕುಳಿತಿದ್ದ ಶಿವಕುಮಾರ್ ಏಕಾಏಕಿ ಆಕೆಯ ಮೇಲೆ ಎರಗಿ ಹರಿತವಾದ ಕತ್ತಿಯಿಂದ ಆಕೆಯನ್ನು ಹತ್ಯೆ ಮಾಡಿದ್ದಾನೆ.

ಈ ಬಗ್ಗೆ ಮಾಹಿತಿ ಹಾಸನ ಎಸ್‌ಪಿ ಹರಿರಾಂ ಶಂಕರ್‌  ಆರೋಪಿಯನ್ನು ನ್ಯಾಯಾಲಯದ ಮುಂದೆಯೇ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

Join Whatsapp