Home ಟಾಪ್ ಸುದ್ದಿಗಳು ಮೂರು ದಿನಗಳಿಂದ ಬಂಡೆಗಳ ಮಧ್ಯೆ ಸಿಲುಕಿದ್ದ ವ್ಯಕ್ತಿಯ ರಕ್ಷಣೆ

ಮೂರು ದಿನಗಳಿಂದ ಬಂಡೆಗಳ ಮಧ್ಯೆ ಸಿಲುಕಿದ್ದ ವ್ಯಕ್ತಿಯ ರಕ್ಷಣೆ

ಹೈದರಾಬಾದ್: ಇಲ್ಲಿನ ಕಾಮಾರೆಡ್ಡಿ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಬಂಡೆಗಳ ಮಧ್ಯೆ ಕಿರಿದಾದ ಸ್ಥಳದಲ್ಲಿ ಸಿಲುಕಿದ್ದ 36 ವರ್ಷದ ವ್ಯಕ್ತಿಯನ್ನು ಮೂರು ದಿನಗಳ ಬಳಿಕ ಗುರುವಾರ ಸುರಕ್ಷಿತವಾಗಿ ಪಾರು ಮಾಡಲಾಗಿದೆ.


ಮಂಗಳವಾರ ಸ್ನೇಹಿತರೊಂದಿಗೆ ಅರಣ್ಯ ಪ್ರದೇಶಕ್ಕೆ ತೆರಳಿದ್ದ ರೆಡ್ಡಿಪೇಟ್ ಗ್ರಾಮದ ಸಿ. ರಾಜು ಅವರು ಬಂಡೆಗಳ ನಡುವಿನ ಕಿರಿದಾದ ಜಾಗದಲ್ಲಿ ಬಿದ್ದ ತನ್ನ ಮೊಬೈಲ್ ತೆಗೆದುಕೊಳ್ಳಲು ಹೋಗಿ ಬಂಡೆಗಳ ನಡುವೆ ಸಿಲುಕಿದ್ದರು. ಆತನ ಜತೆಗೆ ಇದ್ದ ಸ್ನೇಹಿತ ಕುಟುಂಬ ಸದಸ್ಯರು ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದ.


‘ವಿಷಯ ತಿಳಿದ ಪೊಲೀಸ್ ಅಧಿಕಾರಿಗಳು ಇತರ ಇಲಾಖೆಗಳ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಗುರುವಾರ ನಿಯಂತ್ರಿತ ಸ್ಫೋಟಕ ಗಳನ್ನು ಬಳಸಿ ಬಂಡೆಗಳನ್ನು ಒಡೆದು ರಾಜು ಅವರನ್ನು ರಕ್ಷಣೆ ಮಾಡಲಾಯಿತು. ಕಾರ್ಯಾಚರಣೆ ಸಂದರ್ಭದಲ್ಲಿ, ರಾಜು ಅವರಿಗೆ ಆಮ್ಲಜನಕ ಮತ್ತು ದ್ರವ ರೂಪದ ಆಹಾರವನ್ನು ನೀಡಲಾಗಿತ್ತು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆಹಾರವಿಲ್ಲದೆ ಬಳಲಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Join Whatsapp
Exit mobile version