Home ರಾಜ್ಯ ಮುಸ್ಲಿಮ್ ಐಕ್ಯತಾ ವೇದಿಕೆ – ಸುರತ್ಕಲ್ ನಿಯೋಗದಿಂದ ಜಿಲ್ಲಾಧಿಕಾರಿ ಭೇಟಿ : ಸುರತ್ಕಲ್ ವೃತ್ತಕ್ಕೆ...

ಮುಸ್ಲಿಮ್ ಐಕ್ಯತಾ ವೇದಿಕೆ – ಸುರತ್ಕಲ್ ನಿಯೋಗದಿಂದ ಜಿಲ್ಲಾಧಿಕಾರಿ ಭೇಟಿ : ಸುರತ್ಕಲ್ ವೃತ್ತಕ್ಕೆ ವಿವಾದಿತ ವ್ಯಕ್ತಿಗಳ ಹೆಸರನ್ನು ನಾಮಕರಣ ಮಾಡದಂತೆ ಮನವಿ

ಮಂಗಳೂರು: ಮುಸ್ಲಿಮ್ ಐಕ್ಯತಾ ವೇದಿಕೆ ಸುರತ್ಕಲ್ ವಲಯ ನಿಯೋಗ ಇಂದು .ದ.ಕ.ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿ, ಸುರತ್ಕಲ್ ವೃತ್ತಕ್ಕೆ ವಿವಾದಿತ ಯಾವುದೇ ವ್ಯಕ್ತಿಗಳ ಹೆಸರನ್ನು ನಾಮಕರಣ ಮಾಡದೆ, ಕೋಟಿ ಚೆನ್ನಯ ಅಥವಾ ಯು.ಶ್ರೀನಿವಾಸ ಮಲ್ಯ ಅಥವಾ ಎಂ.ಲೋಕಯ್ಯ ಶೆಟ್ಟಿ ರವರ ಪೈಕಿ ಒಬ್ಬರ ಹೆಸರನ್ನು ಆಯ್ಕೆ ಮಾಡಿ ನಾಮಕರಣ ಮಾಡಬೇಕೆಂದು ಆಗ್ರಹಿಸಿದರು.

ಮುಸ್ಲಿಮ್ ಐಕ್ಯತಾ ವೇದಿಕೆ ಸುರತ್ಕಲ್ ಇದರ ಅಧ್ಯಕ್ಷರಾದ ಅಶ್ರಫ್ ಬದ್ರಿಯಾ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.

ನಿಯೋಗದಲ್ಲಿ ಉಪಾಧ್ಯಕ್ಷರಾದ ಅಬ್ದುಲ್ ಜಲೀಲ್ ಅದ್ದು, ಕಾರ್ಯದರ್ಶಿ ಕೆ.ಷರೀಫ್,ಸದಸ್ಯರಾದ ಅಝೀಝ್ ಉಪಸ್ಥಿತರಿದ್ದರು.09:55 AM

Join Whatsapp
Exit mobile version