ಮಂಡ್ಯ | ಹಳ್ಳಕ್ಕೆ ಬಿದ್ದ ಬಸ್: 8 ಮಂದಿಗೆ ಗಾಯ

Prasthutha|

ಮಂಡ್ಯ: ಸಾರಿಗೆ ಸಂಸ್ಥೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಬೆಂಗಳೂರು– ಮೈಸೂರು ಹೆದ್ದಾರಿಯ ಸರ್ವಿಸ್ ರಸ್ತೆ ಪಕ್ಕದ ಹಳ್ಳಕ್ಕೆ ಬಿದ್ದಿರುವ ಘಟನೆ ತಾಲ್ಲೂಕಿನ ರಾಗಿಮುದ್ದನಹಳ್ಳಿ ಗೇಟ್ ಬಳಿ ಶನಿವಾರ ನಡೆದಿದೆ.

- Advertisement -

ಘಟನೆಯಲ್ಲಿ ಚಾಲಕ ಶೇಖರ್ ಮತ್ತು ನಿರ್ವಾಹಕ ರವಿಚಂದ್ರ, ಪ್ರಯಾಣಿಕರಾದ ದೀಪಕ್, ಭಾಸ್ಕರ್, ಅಭಿ, ಕುಶಾಲ್, ನಾಗರಾಜು ಸೇರಿದಂತೆ 8 ಮಂದಿಗೆ ಗಾಯಗಳಾಗಿವೆ. ಬೆಂಗಳೂರಿನಿಂದ ಮೈಸೂರು ಕಡೆ ಹೋಗುತ್ತಿದ್ದ ಬಸ್ನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು. ಅತಿ ವೇಗವಾಗಿ ಬಂದ ಬಸ್ ಹೆದ್ದಾರಿಯ ಡಿವೈಡರ್ ಅನ್ನು ಮುರಿದುಕೊಂಡು, ಸರ್ವಿಸ್ ರಸ್ತೆಗೆ ನುಗ್ಗಿದೆ.

Join Whatsapp