ಮಂಡ್ಯ | ಮಳೆ ಅವಾಂತರ: ಡಿಸಿ ಕಚೇರಿಗೆ ಮುತ್ತಿಗೆ ಹಾಕಿದ ನಿವಾಸಿಗಳು

Prasthutha|

ಮಂಡ್ಯ: ಮಂಡ್ಯ ಜಿಲ್ಲೆಯ ಬಿ.ಡಿ. ಕಾಲೋನಿಯ ನಿವಾಸಿಗಳು ಮಳೆ ನೀರನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ ಘಟನೆ ವರದಿಯಾಗಿದೆ.

- Advertisement -

ಮಳೆಯ ನೀರನ್ನು ತೆರವುಗೊಳಿಸುವಂತೆ ಆಗ್ರಹಿಸಿದ ಬಿ.ಡಿ. ಕಾಲೋನಿ ನಿವಾಸಿಗಳು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯ ಗೇಟನ್ನು ಒಡೆದು ಡಿಸಿ ಕಚೇರಿಗೆ ನುಗ್ಗಿ ಪರಿಹಾರ ಒದಗಿಸುವಂತೆ ಆಗ್ರಹಿಸಿದ್ದಾರೆ. ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸರ್ಕಾರದ ವಿರುದ್ಧ ನೆಟ್ಟಿಗರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಮಳೆಯಿಂದಾಗಿ ಕೆಲವರು ಸಂತ್ರಸ್ತರಾಗಿದ್ದು, ತಮ್ಮ ಮನೆಗಳನ್ನು ಬಿಟ್ಟು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳಬೇಕಾಗಿ ಬಂದಿದೆ.

Join Whatsapp