ಮಂಡ್ಯ: ನಿಲ್ಲದ ಮಳೆ, ಜನಜೀವನ ಅಸ್ತವ್ಯಸ್ತ, ನೀರಿನಲ್ಲೇ ಶವ ಹೊತ್ತು ಸಾಗಿದ ಗ್ರಾಮಸ್ಥರು

Prasthutha|

ಮಂಡ್ಯ: ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಿಲ್ಲೆಯಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದ್ದು, ಶವಸಂಸ್ಕಾರ ಮಾಡಲು ಗ್ರಾಮಸ್ಥರು ಪರದಾಡಿದ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರದಲ್ಲಿ ನಡೆದಿದೆ.

- Advertisement -

ಕಾವೇರಿ ನದಿಗೆ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಹಿನ್ನೆಲೆ ಸ್ಮಶಾನಕ್ಕೆ ಹೋಗುವ ರಸ್ತೆ ಜಲಾವೃತವಾಗಿತ್ತು. ಸುಲೋಚನಾ ಎಂಬ ಮಹಿಳೆ ಅನಾರೋಗ್ಯಿಂದ ಮೃತಪಟ್ಟಿದ್ದು, ಅವರ ಮೃತದೇಹವನ್ನು ಹೂಳಲು ಜನರು ಉಕ್ಕಿ ಹರಿಯುತ್ತಿದ್ದ ನದಿಯನ್ನು ದಾಟಲು ಪರದಾಡುವಂತಾಯಿತು. ಕೊನೆಗೆ ಪ್ರವಾಹದ ನೀರಲ್ಲೆ ಮಹಿಳೆಯ ಶವವನ್ನು ಗ್ರಾಮಸ್ಥರು ಹೊತ್ತುಕೊಂಡು ಹೋಗಿ ಅಂತ್ಯಸಂಸ್ಕಾರ ನೆರವೇರಿಸಿದರು.

Join Whatsapp