ಮಂಡ್ಯದಲ್ಲಿ ಅನೈತಿಕ ಪೊಲೀಸ್ ಗಿರಿ: ಸಂಘಪರಿವಾರದ ನಾಲ್ಕು ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

Prasthutha|

ಮಂಡ್ಯ: ಮೈಸೂರು-ಬೆಂಗಳೂರು ಹೆದ್ದಾರಿ ಬಳಿ ಬೈಕ್ ನಲ್ಲಿ ಹಿಂದೂ ಯುವತಿಯನ್ನು ಕೂರಿಸಿಕೊಂಡು ಹೋಗುತ್ತಿದ್ದ ಅನ್ಯಕೋಮಿನ ಯುವಕನನ್ನು ತಡೆದು ಬೆದರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಯುವಕರ ವಿರುದ್ಧ ಮಂಡ್ಯ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

- Advertisement -


ಅನ್ಯಕೋಮಿನ ಯುವಕನ ಜೊತೆ ಹೋಗುತ್ತಿದ್ದ ಯುವತಿಯನ್ನು ತಡೆದ ಸಂಘಪರಿವಾರದ ಕಾರ್ಯಕರ್ತರು ಯುವಕನಿಗೆ ಹಲ್ಲೆ ನಡೆಸಿದ್ದರು. ಶ್ರೀರಂಗಪಟ್ಟಣದಿಂದಲೂ ಮಂಡ್ಯ ತಾಲೂಕಿನವರೆಗೂ ಇಬ್ಬರನ್ನೂ ಹಿಂಬಾಲಿಸಿ ಅಡ್ಡಗಟ್ಟಿ ಅನೈತಿಕ ಪೊಲೀಸ್ ಗಿರಿ ನಡೆಸಿದ್ದರು. ನಂತರ ಯುವತಿಯನ್ನು ಪೋಷಕರ ವಶಕ್ಕೆ ಒಪ್ಪಿಸಿದ್ದರು. ಅಲ್ಲದೆ, ಯುವತಿಯನ್ನು ಕರೆದೊಯ್ಯುತ್ತಿದ್ದ ಯುವಕನಿಗೆ ಎಚ್ಚರಿಕೆ ನೀಡಿ, ವಾಪಸ್ ಕಳುಹಿಸಿದ್ದರು.


ಈ ಸಂಬಂಧ ಯುವಕ ಮಂಡ್ಯದ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಹೀಗಾಗಿ, ಪೊಲೀಸರು ಆರೋಪಿಗಳಾದ ಪುನೀತ್, ಲಂಕೇಶ್ ಸೇರಿ ನಾಲ್ವರ ವಿರುದ್ಧ IPC 143,341,504, ಹಾಗೂ 506 ಅಡಿ ಪ್ರಕರಣ ದಾಖಲಿಸಿದ್ದಾರೆ.

Join Whatsapp