ಮಂಡ್ಯ: ಕಲುಷಿತ ನೀರು ಸೇವಿಸಿ ಇಬ್ಬರು ವೃದ್ಧರು ಸಾವು

Prasthutha|

ಮಂಡ್ಯ: ಕಲುಷಿತ ನೀರು ಸೇವಿಸಿ ಇಬ್ಬರು ವೃದ್ಧರು ಸಾವನ್ನಪ್ಪಿ, ಮೂವರು ಸ್ಥಿತಿ ಗಂಭೀರವಾದ ಘಟನೆ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಮಾರೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

- Advertisement -

ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಜವರಮ್ಮ ಹಾಗೂ ಚಿಕ್ಕಮ್ಮ ಎಂಬ ವೃದ್ಧರು ಸಾವನ್ನಪ್ಪಿದವರು.

12 ಮಂದಿ ಅಸ್ವಸ್ಥಗೊಂಡಿದ್ದು ಮೂವರ ಸ್ಥಿತಿ ಗಂಭೀರವಾಗಿದೆ.
ಹಾಸನ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಮೂವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಳಿದ ಅಸ್ವಸ್ಥರು ಚನ್ನರಾಯಪಟ್ಟಣ ಹಾಗೂ ಶ್ರವಣಬೆಳಗೊಳ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

- Advertisement -

ಘಟನೆ ನಡೆದು 4-5 ದಿನ ಕಳೆದರೂ ಆರೋಗ್ಯ ಇಲಾಖೆ ಕ್ರಮವಹಿಸಿಲ್ಲ. ಮಂಗಳವಾರ ವೃದ್ಧರಿಬ್ಬರು ಸಾವನ್ನಪ್ಪಿದರೂ ಅಧಿಕಾರಿಗಳು ಮಾತ್ರ ಗ್ರಾಮಕ್ಕೆ ಭೇಟಿ ನೀಡಿಲ್ಲ. ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ನಡೆಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಕ್ರಮವಹಿಸಬೇಕು ಎಂದು ಗ್ರಾಮಸಸ್ಥರು ಆಗ್ರಹಿಸಿದ್ದಾರೆ.



Join Whatsapp