Home ಟಾಪ್ ಸುದ್ದಿಗಳು ಮಂಡ್ಯ: ಯುವಕನ ಭೀಕರ ಕೊಲೆ

ಮಂಡ್ಯ: ಯುವಕನ ಭೀಕರ ಕೊಲೆ

ಮಂಡ್ಯ: ಹಳೆಯ ದ್ವೇಷದ ಹಿನ್ನೆಲೆಯಲ್ಲಿ  ಯುವಕನೊಬ್ಬನನ್ನು ಭೀಕರವಾಗಿ ಕೊಲೆಗೈದಿರುವ ಘಟನೆ ನಾಗಮಂಗಲ ತಾಲೂಕಿನ ಬೆಳ್ಳೂರಿನಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದೆ.

ಬೆಳ್ಳೂರಿನ ಅಂಬೇಡ್ಕರ್ ಕಾಲೋನಿ ನಿವಾಸಿ ಸುನೀಲ್ (36) ಕೊಲೆಯಾದ ಯುವಕ. ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಸಂತೆ ಮೈದಾನದ ಅರಳಿ ಮರದ ಬಳಿ ಮಧ್ಯರಾತ್ರಿ ಸುನೀಲ್ ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ  ಕೊಲೆಗೈದು ಪರಾರಿಯಾಗಿದ್ದಾರೆ.

ತೀವ್ರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಸುನೀಲ್ ನನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಬೆಳ್ಳೂರು ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ  ಪ್ರಕರಣ ದಾಖಲಿಸಿ, ಆರೋಪಿಗಳ ಬಂಧನಕ್ಕೆ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ.

  ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ.

Join Whatsapp
Exit mobile version