Home ಕರಾವಳಿ ಮಂಗಳೂರು: ಎಂಟು ಮಂದಿ ತಂಡದಿಂದ‌ ಯುವಕನಿಗೆ ಮಾರಣಾಂತಿಕ ಹಲ್ಲೆ !

ಮಂಗಳೂರು: ಎಂಟು ಮಂದಿ ತಂಡದಿಂದ‌ ಯುವಕನಿಗೆ ಮಾರಣಾಂತಿಕ ಹಲ್ಲೆ !

ಮಂಗಳೂರು: ಎಂಟು ಮಂದಿ ತಂಡದಿಂದ‌ ಯುವಕನಿಗೆ ಮಾರಣಾಂತಿಕ ಹಲ್ಲೆ  ನಡೆಸಿದ ಘಟನೆ ತಡರಾತ್ರಿ ಮಂಗಳೂರಿನ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಶ್ರವಣ್ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಎರಡು ತಂಡಗಳ ನಡುವಿನ ವೈಷಮ್ಯ ಮತ್ತು 2020 ರಲ್ಲಿ ಬರ್ಕೆಯಲ್ಲಿ ನಡೆದ ಇಂದ್ರಜಿತ್ ಹತ್ಯೆ ಪ್ರಕರಣಕ್ಕೆ ಸೇಡು ತೀರಿಸಿಕೊಳ್ಳುವ ಪ್ರಯತ್ನವೇ ಗ್ಯಾಂಗ್‌ ವಾರ್‌ ಗೆ ಕಾರಣವಾಗಿದೆ. ಎಂದು ತಿಳಿದು ಬಂದಿದೆ.

2020 ರಲ್ಲಿ ಬರ್ಕೆಯಲ್ಲಿ ನಡೆದ ಇಂದ್ರಜಿತ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತೀಕಾರವಾಗಿ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ.

ಈ ಘಟನೆಯ ಹಿಂದೆ ಯಾವುದೇ ಕೋಮು ದ್ವೇಷ ಇರುವುದಿಲ್ಲ.  ಬಹುತೇಕ ಎಲ್ಲರೂ ಒಂದೇ ಕೋಮಿನವರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Join Whatsapp
Exit mobile version