ಮಂಗಳೂರು: ಕಳವು ಪ್ರಕರಣದ ಆರೋಪಿ ಪೊಲೀಸ್ ವಶದಲ್ಲಿರುವಾಗಲೇ ಸಾವು, ಲಾಕಪ್ ಡೆತ್ ಶಂಕೆ

Prasthutha|

ಮಂಗಳೂರು: ಕಳ್ಳತನ ಆರೋಪದ ಮೇಲೆ ಪೊಲೀಸ್ ವಶದಲ್ಲಿದ್ದ ಯುವಕನೋರ್ವ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು , ಲಾಕಪ್ ಡೆತ್ ಶಂಕೆ ವ್ಯಕ್ತವಾಗಿದೆ.
ಮಂಗಳೂರಿನ ಉತ್ತರ ಠಾಣೆಯಲ್ಲಿ ಘಟನೆ ನಡೆದಿದ್ದು, ಮೃತ ಯುವಕನನ್ನು ಉರ್ವ ಮಾರ್ಕೆಟ್ ಮಾರಿಯಮ್ಮ ದೇವಸ್ಥಾನದ ಹತ್ತಿರದ ನಿವಾಸಿ ರಾಜೇಶ್ (30) ಎಂದು ಗುರುತಿಸಲಾಗಿದೆ.

- Advertisement -

ಘಟನೆ ಹಿನ್ನೆಲೆ

ಶುಕ್ರವಾರ ಬೆಳಗಿನ ಜಾವ 3.30ರ ಸಮಯದಲ್ಲಿ ಮಂಗಳೂರಿನ ಜ್ಯೋತಿ ವೃತ್ತದ ಸಮೀಪ ಸ್ಮಾರ್ಟ್ ಸಿಟಿ ಕಾಮಗಾರಿಗಳಿಗಾಗಿ ತಂದಿಡಲಾಗಿದ್ದ ಕಬ್ಬಿಣದ ಸರಳುಗಳನ್ನು ರಾಜೇಶ್ ಹಾಗೂ ಆತನ ಸ್ನೇಹಿತ ಕಳವುಗೈದು ಪರಾರಿಯಾಗಲು ಯತ್ನಿಸುತ್ತಿದ್ದ ವೇಳೆ, ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಸಿಬ್ಬಂದಿ ಕಳವು ಮಾಲಿನ ಸಹಿತ ಇಬ್ಬರನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದು, ಬಳಿಕ ಠಾಣೆಯಿಂದ ನೇರವಾಗಿ ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ಆ ವೇಳೆಗಾಗಲೇ ರಾಜೇಶ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

- Advertisement -

ಪೊಲೀಸ್ ವಶದಲ್ಲಿರುವಾಗಲೇ ಮೃತಪಟ್ಟಿರುವುದರಿಂದ ಎಸಿಪಿ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

Join Whatsapp