ಮಂಗಳೂರು ಆಟೋ ಸ್ಪೋಟ ಪ್ರಕರಣ| ನಿಷ್ಪಕ್ಷ ತನಿಖೆಗೆ ಅಥಾವುಲ್ಲಾ ಜೋಕಟ್ಟೆ ಆಗ್ರಹ

Prasthutha|


ಮಂಗಳೂರು: ಆಟೋ ರಿಕ್ಷಾ ಸ್ಪೋಟ ಪ್ರಕರಣದ ಸಂಬಂಧ SDPI ರಾಜ್ಯ ಸಮಿತಿ ಸದಸ್ಯ ಅಥಾವುಲ್ಲಾ ಜೋಕಟ್ಟೆ ಪ್ರತಿಕ್ರಿಯಿಸಿದ್ದು, ನಿಷ್ಪಕ್ಷ ತನಿಖೆ ನಡೆಸಲು ಅವರು ಆಗ್ರಹಿಸಿದ್ದಾರೆ.

- Advertisement -


ಈ ಕುರಿತು ಟ್ವೀಟ್ ಮಾಡಿರುವ ಅವರು, ಅಧಿಕಾರಿಗಳು ಯಾವುದೇ ಒತ್ತಡಕ್ಕೆ ಮಣಿಯದೆ ಕೂಲಂಕುಷವಾಗಿ ನಿಷ್ಪಕ್ಷ ತನಿಖೆ ನಡೆಸಿ ನೈಜ ಆರೋಪಿಗಳನ್ನು ಬಯಲಿಗೆಳೆಯಬೇಕೆಂದು ಕೇಳಿಕೊಂಡಿದ್ದಾರೆ.


“ಮಂಗಳೂರು ವಿಮಾನ ನಿಲ್ದಾಣ ಬಾಂಬ್ ಅಳವಡಿಸಿ ಆತಂಕ ಸೃಷ್ಟಿಸಿದ ಪ್ರಾರಂಭ ಹಂತದಲ್ಲಿ ತನಿಖೆಯ ಹಾದಿ ತಪ್ಪಿಸಿ ನಿರ್ಧಿಷ್ಟ ಸಮುದಾಯದ ಮೇಲೆ ಸಂಶಯ ಮೂಡಿಸುವ ಸದ್ರಿ ಪ್ರಯತ್ನಕ್ಕಿಂತಲೂ ಅಧಿಕಾರಿಗಳು ಈ ಪ್ರಕರಣದಲ್ಲಿ ಯಾವುದೇ ಒತ್ತಡಕ್ಕೆ ಮಣಿಯದೆ ಕೂಲಂಕಷವಾಗಿ ನಿಷ್ಪಕ್ಷ ತನಿಖೆ ನಡೆಸಿ ನೈಜ ಆರೋಪಿಗಳನ್ನು ಬಯಲಿಗಳೆಯಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

Join Whatsapp