ಮಂಗಳೂರು: ಬಜರಂಗ ದಳದ ಅವಿನಾಶ್‌ಗೆ ಗಡಿಪಾರ್ ನೋಟಿಸ್

Prasthutha|

ಮಂಗಳೂರು: ಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಪುರುಷರಕಟ್ಟೆ ನಿವಾಸಿ, ಹಿಂದುತ್ವ ಸಂಘಟನೆಯ ಮುಖಂಡ ಅವಿನಾಶ್ ಪುರುಷರಕಟ್ಟೆ ಗಡಿಪಾರಿಗೆ ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್ ಠಾಣೆಯಿಂದ ನೋಟಿಸ್ ನೀಡಲಾಗಿದೆ.

- Advertisement -

ನಾಳೆ ಅವರಿಗೆ ಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಲಾಗಿದ್ದು, ಹಾಜರಾಗದಿದ್ದಲ್ಲಿ ಗಡಿಪಾರು ಮಾಡುವುದಾಗಿ ತಿಳಿಸಲಾಗಿದೆ.

ಅವಿನಾಶ್ ಪುರುಷರಕಟ್ಟೆ ಇವರನ್ನು ದಕ್ಷಿಣ ಕನ್ನಡ ಕರ್ನಾಟಕ ಪೊಲೀಸ್ ಕಾಯ್ದೆ- 1963 ಕಲಂ 55(ಎ) ಮತ್ತು (ಬಿ) ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಕುರಿತು ಪುತ್ತೂರು ಸಹಾಯಕ ಆಯುಕ್ತರ ಕಚೇರಿಯ ನ್ಯಾಯಾಲಯದಲ್ಲಿ ಜ 24 ರಂದು ಪೂರ್ವಾಹ್ನ 11.00 ಘಂಟೆಗೆ ವಿಚಾರಣೆಗೆ ನಿಗದಿಪಡಿಸಲಾಗಿದೆ ಎಂದು ನೋಟಿಸಲ್ಲಿ ತಿಳಿಸಲಾಗಿದೆ.

- Advertisement -

ಈ ಪ್ರಕರಣದಲ್ಲಿ ನೀವು ಸ್ವತಃ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ತಿಳಿಸಲಾಗಿದೆ. ತಪ್ಪಿದಲ್ಲಿ ಸದರಿ ಪ್ರಕರಣದಲ್ಲಿ ನಿಮಗೆ ಆಸಕ್ತಿ ಇಲ್ಲವೆಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ಏಕಪಕ್ಷಿಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.



Join Whatsapp