ಮಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ: ಆರೆಂಜ್ ಅಲರ್ಟ್​ ಘೋಷಣೆ

Prasthutha|

- Advertisement -

ಮಣ್ಣು ಕುಸಿತ: ಬೆಂಗಳೂರು-ಮಂಗಳೂರು ರೈಲುಗಳ ಸಂಚಾರ ರದ್ದು

ಮಂಗಳೂರು: ಮಲೆನಾಡು, ಕರಾವಳಿ ‌ಭಾಗದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಸಕಲೇಶಪುರ ತಾಲ್ಲೂಕಿನ ಕಡಗರವಳ್ಳಿ-ಯಡಕುಮೇರಿ ನಡುವಿನ ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿತವಾಗಿ ಬೆಂಗಳೂರು-ಮಂಗಳೂರು ಮಾರ್ಗದ 8 ರೈಲುಗಳ ಸಂಚಾರ ರದ್ದಾಗಿದೆ.

- Advertisement -


ಬೆಂಗಳೂರು-ಹಾಸನ-ಮಂಗಳೂರು ಮಾರ್ಗ ಮಧ್ಯೆ ಸಂಚರಿಸುವ ಎಲ್ಲಾ ರೈಲುಗಳ ಸಂಚಾರ ಬಂದ್ ಆಗಿದೆ.

ಇನ್ನು ದ.ಕ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಮಂಗಳೂರು ನಗರ ಹಾಗೂ ದ.ಕ ಜಿಲ್ಲೆಯ ವಿವಿಧೆಡೆ ಇಂದು ಮಧ್ಯಾಹ್ನದಿಂದ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ.

ಕೆಲವೆಡೆ ವಿದ್ಯುತ್ ಕಂಬಗಳು ಧರೆಗುರುಳಿದ್ದು, ವಿದ್ಯುತ್ ವ್ಯತ್ಯಯ ಉಂಟಾಗಿದೆ. ಇನ್ನು ಕೆಲವು ಕಡೆ ಮನೆಗಳಿಗೆ ಹಾನಿಯಾಗಿದೆ.



Join Whatsapp