ಮಂಗಳೂರು| ಬೈಕ್ ಅಪಘಾತ; ವೈದ್ಯಕೀಯ ವಿದ್ಯಾರ್ಥಿ ದಾರುಣ ಸಾವು, ಸಹಸವಾರ ಗಂಭೀರ

Prasthutha|

ಮಂಗಳೂರು: ರಸ್ತೆ ಹಂಪ್’ಗೆ ಬೆಂಗಳೂರಿನ ವೈದ್ಯ​ ವಿದ್ಯಾರ್ಥಿ ಸಾವನ್ನಪ್ಪಿ, ಸಹ ಸವಾರ ಗಾಯಗೊಂಡಿರುವ ದಾರುಣ ಘಟನೆ ಕುತ್ತಾರು ಸಮೀಪದ ಮದಕ ಕ್ವಾಟ್ರಗುತ್ತು ಬಳಿ ನಿನ್ನೆ ಮಧ್ಯರಾತ್ರಿ ಸಂಭವಿಸಿದೆ.

- Advertisement -

ಯಶವಂತಪುರದ ಶಿಕ್ಷಕ ಸಿದ್ದರಾಜು ಎಂಬವರ ಪುತ್ರ ನಿಶಾಂತ್ (22) ಮೃತಪಟ್ಟವರು. ಸಹಸವಾರ ಬೀದರ್ ನಿವಾಸಿ ಶಕೀಬ್ ಗಾಯಗೊಂಡಿದ್ದಾರೆ. ಇಬ್ಬರೂ ನಾಟೆಕಲ್ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಪೂರೈಸಿ ದ್ವಿತೀಯ ವರ್ಷದ ಇಂಟನ್೯ಶಿಪ್ ನಡೆಸುತ್ತಿದ್ದರು.

ಕುತ್ತಾರು ಸಿಲಿಕೋನಿಯಾ ಫ್ಲ್ಯಾಟ್​’ನಲ್ಲಿ ವಾಸಿಸುತ್ತಿದ್ದ ಇಬ್ಬರೂ ರಾತ್ರಿ ಬೈಕಿನಲ್ಲಿ ಜಾಲಿ ರೈಡ್ ತೆರಳುವಾಗ ರಸ್ತೆಯಲ್ಲಿದ್ದ ಹಂಪ್ ಗಮನಕ್ಕೆ ಬಾರದೇ ನಿಯಂತ್ರಣ ತಪ್ಪಿ ಬಿದ್ದು ಸವಾರ ನಿಶಾಂತ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

- Advertisement -

ಹೆಚ್ಚು ವಾಹನ ಸಂಚಾರವಿಲ್ಲದ ರಸ್ತೆಯಾಗಿದ್ದರಿಂದ ರಾತ್ರಿ‌ 12.15ಕ್ಕೆ ಆದ ಅಪಘಾತ 12.30ರ ವೇಳೆ ಸ್ಥಳೀಯರ ಗಮನಕ್ಕೆ ಬಂದಿದೆ. ತಕ್ಷಣ ಹಿಂಬದಿ ಸವಾರನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp