ಮಂಗಳೂರು: ಮುಸ್ಲಿಮ್ ವಿದ್ಯಾರ್ಥಿಗೆ ಹಲ್ಲೆ ಪ್ರಕರಣ| ಇಬ್ಬರ ಬಂಧನ

Prasthutha|

ಮಂಗಳೂರು: KSRTC ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಮ್ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

- Advertisement -

ಬಸ್ನಲ್ಲಿ ಪರಿಚಿತ ವಿದ್ಯಾರ್ಥಿನಿ ಜತೆ ಮಾತನಾಡಿ, ಆಕೆಗೆ ಚಾಕೊಲೇಟ್ ನೀಡಲು ಮುಂದಾಗಿದ್ದಾನೆ ಎಂದು ಆರೋಪಿಸಿ ಕಿಡಿಗೇಡಿಗಳು ನಗರದ ಬಲ್ಮಠದ ಪದವಿ ಕಾಲೇಜೊಂದರ ವಿದ್ಯಾರ್ಥಿಯಾಗಿರುವ ಶಾಕೀರ್ ಎಂಬವರ ಮೇಲೆ ಹಲ್ಲೆ ನಡೆಸಿದ್ದರು.

‘ಪ್ರಕರಣದ ಆರೋಪಿಗಳಾದ ಚಂದ್ರಶೇಖರ್ ಹಾಗೂ ರೋಹಿತ್ ನನ್ನು ಬಂಧಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
“ವಿಟ್ಲ ಬಳಿಯ ವೀರಕಂಬ ಗ್ರಾಮದ ಕೆಲಿಂಜ ಎಂಬಲ್ಲಿ ಕೆಲಿಂಜ ನಿವಾಸಿಗಳಾದ ಚಂದ್ರಶೇಖರ, ಪ್ರಜ್ವಲ್, ರೋಹಿತ್ ಹಾಗೂ ಇತರ ಮೂವರು ಹಲ್ಲೆ ನಡೆಸಿದ್ದಾರೆ’ ಎಂದು ಶಾಕೀರ್ ವಿಟ್ಲ ಪೊಲೀಸ್ ಠಾಣೆಗೆ ನೀಡಿದ್ದ ದೂರಿನಲ್ಲಿ ತಿಳಿಸಿದ್ದರು. 6 ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು.

- Advertisement -

Join Whatsapp