ಮಂಗಳೂರು: ಕರಡು ಮತದಾರರ ಪಟ್ಟಿಯ ವೇಳಾಪಟ್ಟಿ ಪ್ರಕಟ – ಜಿಲ್ಲಾಧಿಕಾರಿ ಡಾ. ರಾಜೇಂದ್ರ

Prasthutha|

ಮಂಗಳೂರು: 2022 ರ ಫೆಬ್ರವರಿ, ಮಾರ್ಚ್ ಪಧಾವಧಿ ಮುಕ್ತಾಯವಾಗಿರುವ ಮಂಗಳೂರು, ಬಂಟ್ವಾಳ ಹಾಗೂ ಬೆಳ್ತಂಗಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ಕರಡು ಮತದಾರರ ಪಟ್ಟಿಯ ವೇಳಾಪಟ್ಟಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಪ್ರಕಟಿಸಿದ್ದಾರೆ.

- Advertisement -

2022ರ ಜ.03ರ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟನೆ ದಿನವಾಗಿದೆ.. ಜ.03 ರಿಂದ ಜ.15ರ ವರೆಗೆ ಕೃಷಿ ಮತದಾರರ ಪಟ್ಟಿಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಬಹುದಾದ ದಿನವಾಗಿದೆ. ಜ.17 ರಿಂದ ಜ.23ರ ವರೆಗೆ ಸ್ವೀಕರಿಸಲಾದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಇತ್ಯರ್ಥಪಡಿಸುವಿಕೆಯ ದಿನವಾಗಿದೆ. ಜ.24ರ ಸೋಮವಾರ ಮತದಾರರ ಪಟ್ಟಿಯ ಅಂತಿಮ ಪ್ರಕಟನೆ ದಿನವಾಗಿದೆ ಎಂದು ಅವರು ತಿಳಿಸಿದರು.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವ್ಯಾಪ್ತಿಯ ಕೃಷಿಕರು ತಮ್ಮ ಹೆಸರು ಸಂಬಂಧ ಪಟ್ಟ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿರುವ ಬಗ್ಗೆ ತಾಲೂಕು ಕಚೇರಿಯಲ್ಲಿ ಲಭ್ಯವಿರುವ ಕರಡು ಮತದಾರರ ಪಟ್ಟಿಯಲ್ಲಿ ಪರಿಶೀಲಿಸಬಹುದಾಗಿದೆ. ಪಟ್ಟಿಯಲ್ಲಿ ಹೆಸರು ನೋಂದಣಿಯಾಗದಿದ್ದಲ್ಲಿ ಜ.03 ರಿಂದ ಜ.15ರ ಅವಧಿಯಲ್ಲಿ ತಹಶೀಲ್ದಾರರಿಗೆ ಹೆಸರು ನೋಂದಾಯಿಸುವಂತೆ ಕೋರಿ ಮನವಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Whatsapp