Home ಕರಾವಳಿ ಮಂಗಳೂರು | ಕಾರು ಅಪಘಾತ: ಪಾದಚಾರಿ ಮಹಿಳೆ ಸೇರಿ ಐವರಿಗೆ ಗಾಯ

ಮಂಗಳೂರು | ಕಾರು ಅಪಘಾತ: ಪಾದಚಾರಿ ಮಹಿಳೆ ಸೇರಿ ಐವರಿಗೆ ಗಾಯ

ಮುಲ್ಕಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮಹಿಳೆಗೆ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿರುವ ಘಟನೆ ಕಿನ್ನಿಗೋಳಿ – ಮೂಡಬಿದ್ರೆ ರಾಜ್ಯ ಹೆದ್ದಾರಿಯ ಎಂಸಿಸಿ ಬ್ಯಾಂಕ್ ಬಳಿ ನಡೆದಿದೆ.


ಪಕ್ಷಿಕೆರೆ ಕೆಮ್ರಾಲ್ ನಿವಾಸಿ ಜಯಂತಿ ಶೆಟ್ಟಿ (50) ಗಂಭೀರ ಗಾಯಗೊಂಡ ಮಹಿಳೆ. ಉಳಿದಂತೆ ಕಾರಿನಲ್ಲಿದ್ದ ಚಾಲಕ ಕೆ.ಹೆಚ್. ಅಬ್ದುಲ್ ಖಾದರ್ (65), ರಿದಾ (16), ರಶ್ಮಿ (18), ಕೌಸರ್ (46), ಎಂಬುವವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.


ಕೃಷ್ಣಾಪುರದಿಂದ ಮೂಡಬಿದ್ರೆಯ ತೋಡಾರ್ ಕಡೆಗೆ ಹೋಗುತ್ತಿದ್ದ ಕಾರು ಕಿನ್ನಿಗೋಳಿಯ ಎಂಸಿಸಿ ಬ್ಯಾಂಕ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಲ ಬದಿಗೆ ಚಲಿಸಿ ಪಾದಚಾರಿ ಮಹಿಳೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Join Whatsapp
Exit mobile version