ಮಂಗಳೂರು | ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

Prasthutha|

ಮಂಗಳೂರು: ಖಾಸಗಿ ಕಾಲೇಜಿನ ಹಾಸ್ಟೆಲ್ ಕಿಟಕಿ ಮುರಿದು ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ. ವಿದ್ಯಾರ್ಥಿನಿಯರ ನಾಪತ್ತೆಯ ಕಾರಣ ಬಹಿರಂಗವಾಗಿದ್ದು, ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದಕ್ಕೆ ಹೀಗೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -


ಇತ್ತೀಚೆಗೆ ನಡೆದ ಪ್ರಥಮ ಪಿಯುಸಿ ಯುನಿಟ್ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರು ಕಡಿಮೆ ಅಂಕ ಪಡೆದಿದ್ದರು. ಇದರಿಂದ ಮನೆಯವರಿಗೆ ಯಾವ ರೀತಿ ಉತ್ತರಿಸುವುದು ಎಂದು ತಿಳಿಯದೆ ಪರಾರಿಯಾಗಲು ನಿರ್ಧರಿಸಿದ್ದರು. ಮೂವರಲ್ಲಿ ಓರ್ವ ವಿದ್ಯಾರ್ಥಿನಿಯ ಸಂಬಂಧಿಕರು ಚೆನ್ನೈನಲ್ಲಿ ಇರುವುದರಿಂದ ಇವರು ರೈಲಿನಲ್ಲಿ ಚೆನ್ನೈಗೆ ಪ್ರಯಾಣ ಬೆಳೆಸಿದ್ದಾರೆ ಎಂದು ತಿಳಿದು ಬಂದಿದೆ.

ಆದರೆ ಚೆನ್ನೈಗೆ ಹೋದ ಬಳಿಕ ಅವರಿಗೆ ಮನೆಯವರು ಆತಂಕಗೊಂಡಿರಬಹುದು ಎಂಬುದು ಅರಿವಾಗಿದೆ. ಬಳಿಕ ಚೆನ್ನೈ ಪೊಲೀಸ್ ಠಾಣೆಗೆ ಹೋಗಿದ್ದಾರೆ. ಚೆನ್ನೈ ಪೊಲೀಸರು ವಿಚಾರಣೆ ನಡೆಸಿ ಮಂಗಳೂರಿಗೆ ಕರೆತರಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

- Advertisement -


ಬುಧವಾರ ಮುಂಜಾನೆ ಸುಮಾರು 3.30 ಕ್ಕೆ ಬೆಂಗಳೂರಿನ ಇಬ್ಬರು ಹಾಗೂ ಚಿಕ್ಕಮಗಳೂರಿನ ಓರ್ವ ವಿದ್ಯಾರ್ಥಿನಿ ಹಾಸ್ಟೆಲ್ ನ ಕಿಟಕಿ ಮುರಿದು ಹೊರಬಂದು ಕಾಣೆಯಾಗಿದ್ದರು.

Join Whatsapp