ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ರಿಕ್ಷಾ ಚಾಲಕ ಆಸ್ಪತ್ರೆಯಿಂದ ಬಿಡುಗಡೆ

Prasthutha|

- Advertisement -

ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಿಕ್ಷಾ ಚಾಲಕ ಪುರುಷೋತ್ತಮ ಇದೀಗ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ನಗರದ ನಾಗುರಿ ಎಂಬಲ್ಲಿ ನ.19ರಂದು ಕುಕ್ಕರ್ ಸ್ಫೋಟ ಪ್ರಕರಣ ಸಂಭವಿಸಿತ್ತು. ಘಟನೆಯಲ್ಲಿ ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದರು. ಇದೀಗ ನಿರಂತರ ಸರಿಸುಮಾರು ಎರಡು ತಿಂಗಳ ಚಿಕಿತ್ಸೆಯ ಬಳಿಕ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Join Whatsapp