ಮಂಗಳೂರು: ತಂದೆಯಿಂದಲೇ ಮಗನಿಗೆ ಗುಂಡೇಟು ಪ್ರಕರಣ, ಬಾಲಕನ ಅಂಗಾಂಗ ದಾನಕ್ಕೆ ನಿರ್ಧಾರ

Prasthutha|

ಪುತ್ರನ ಸ್ಥಿತಿ ನೋಡಿ ತಂದೆಗೂ ಹೃದಯಾಘಾತ

- Advertisement -

ಮಂಗಳೂರು: ತಂದೆಯಿಂದಲೇ ಮಗನಿಗೆ ಗುಂಡೇಟು ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯವಗೊಂಡಿರುವ ಬಾಲಕನ ಅಂಗಾಂಗ ದಾನಕ್ಕೆ ಕುಟುಂಬದವರು ನಿರ್ಧರಿಸಿದ್ದಾರೆ.
ಮಂಗಳೂರಿನ ಮೋರ್ಗನ್ ಗೇಟ್ ಬಳಿಯ ವೈಷ್ಣವಿ ಕಾರ್ಗೋ ಪ್ರೈ ಲಿಮಿಟೆಡ್ ಮುಂಭಾಗದಲ್ಲಿ ನಿನ್ನೆ ನಡೆದ ಗೊಂದಲದ ವೇಳೆ, ರಾಜೇಶ್ ಪ್ರಭು ತನ್ನ ಪಿಸ್ತೂಲ್ ನಿಂದ ಎರಡು ಸುತ್ತು ಫೈರಿಂಗ್ ಮಾಡಿದ್ದರು. ಆಗ ಅವರ ಮಗನಿಗೆ ತಗುಲಿ ಆತ ಗಂಭೀರ ಗಾಯಗೊಂಡಿದ್ದ.


ಗಾಯಗೊಂಡ ಸುಧೀಂದ್ರ ಅವರನ್ನು ಮಂಗಳೂರಿನ ಯುನಿಟಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ಅವರ ಮಿದುಳು ನಿಷ್ಕ್ರಿಯವಾಗಿದ್ದು, ಇನ್ನು ಬದುಕುಳಿಯುವ ಸಾಧ್ಯತೆ ಕಡಿಮೆ ಎಂದು ವೈದ್ಯರು ತಿಳಿಸಿದ ಹಿನ್ನೆಲೆಯಲ್ಲಿ ಅಂಗಾಂಗ ದಾನಕ್ಕೆ ಕುಟುಂಬದವರು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ತಯಾರಿ ನಡೆಯುತ್ತಿದೆ ಎಂದು ತಿಳಿದು ಬಂದಿದೆ.
ಈ ಮಧ್ಯೆ ಮಗನ ಪರಿಸ್ಥಿತಿ ತಿಳಿದು ಗುಂಡು ಹಾರಿಸಿದ ತಂದೆಗೆ ಹೃದಯಾಘಾತವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Join Whatsapp