ಮಂಗಳೂರು । ಫರಂಗಿಫೇಟೆಯಲ್ಲಿ ಮಸೀದಿಗೆ ನುಗ್ಗಿದ ದುಷ್ಕರ್ಮಿಗಳಿಂದ ಧರ್ಮ ಗುರುಗಳ ಮೇಲೆ ಹಲ್ಲೆ, ಕೊಲೆ ಯತ್ನ !

Prasthutha|

► ಸಿಸಿಟಿವಿಯಲ್ಲಿ ದುಷ್ಕರ್ಮಿಗಳ ದೃಶ್ಯಗಳು ಸೆರೆ, ವೀಡಿಯೋ ವೀಕ್ಷಿಸಿ

- Advertisement -

ಮಂಗಳೂರು : ಮಂಗಳೂರಿನ ಫರಂಗಿಪೇಟೆಯ ಮಸೀದಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಧರ್ಮಗುರುವಿಗೆ ಹಲ್ಲೆ ನಡೆಸಿರುವ ಘಟನೆ ನಿನ್ನೆ ರಾತ್ರಿ ನಡೆದಿದ್ದು ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ‌. ಫರಂಗಿಪೇಟೆ – ಅಮ್ಮೆಮಾರ್ ರಸ್ತೆಯಲ್ಲಿರುವ ಬಿರ್ರುಲ್ ವಾಲಿದೈನ್ ಮಸೀದಿಯ ಧರ್ಮ ಗುರು, ಕುಂದಾಪುರ ನಿವಾಸಿ ಮುಸ್ತಾಕ್ ಹಲ್ಲೆಗೊಳಗಾದವರಾಗಿದ್ದಾರೆ. ಇವರು ದುಷ್ಕರ್ಮಿಗಳಿಂದ ತಪ್ಪಿಸಿಕೊಳ್ಳುವ ಸಂದರ್ಭದಲ್ಲಿ ಕಾಲಿಗೆ ಗಾಯಗಳಾಗಿದ್ದು ತುಂಬೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಾಪಾಸಾಗಿದ್ದಾರೆ.

ರಾತ್ರಿ 12 ಗಂಟೆಯ ಸುಮಾರಿಗೆ ಮಸೀದಿಗೆ ನುಗ್ಗಿರುವ ಎರಡು ಬೈಕ್ ಗಳಲ್ಲಿದ್ದ ಮೂರು ಮಂದಿಯ ತಂಡ ಮಸೀದಿಯ 2ನೇ ಮಹಡಿಯಲ್ಲಿ ಮಲಗಿದ್ದ ಧರ್ಮ ಗುರು ಮುಸ್ತಾಕ್ ಅವರ ಕತ್ತು ಹಿಚುಕಿ ಹಲ್ಲೆ ನಡೆಸಿದೆ. ಈ ವೇಳೆ ಮುಸ್ತಾಕ್ ಅವರು ದುಷ್ಕರ್ಮಿಗಳಿಂದ ಕೈಯ್ಯಿಂದ ತಪ್ಪಿಸಿಕೊಂಡು ಕೆಳ ಅಂತಸ್ತಿಗೆ ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.

- Advertisement -

ಸಿಸಿಟಿವಿ ದೃಶ್ಯ

ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು ಓಡುವಾಗ ಮುಸ್ತಾಕ್ ಅವರ ಕಾಲಿಗೆ ಗಾಯಗಳಾಗಿದ್ದು, ತುಂಬೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಸೀದಿಯ ಸಿಸಿ ಕೆಮರಾದಲ್ಲಿ ದುಷ್ಕರ್ಮಿಗಳು ಮಸೀದಿಯೊಳಗೆ ನುಗ್ಗಿರುವ ದೃಶ್ಯ ಸೆರೆಯಾಗಿದ್ದು ಆದರೆ ದುಷ್ಕರ್ಮಿಗಳ ಹೆಲ್ಮೆಟ್ ಧರಿಸಿದ್ದರು ಎಂದು ದೂರು ನೀಡಲಾಗಿದೆ.  ಘಟನೆಯ ಬಗ್ಗೆ ಮಸೀದಿ ಅಧ್ಯಕ್ಷ ಸೈಯದ್ ಬಾವಾ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ‌. ಸ್ಥಳಕ್ಕೆ ಅಪರಾಧ ವಿಭಾಗದ ಅಧಿಕಾರಿ ಸಂಜೀವ ಕೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Join Whatsapp