ಮಂಗಳೂರು ಶಾಸಕ ಯುಟಿ ಖಾದರ್ ಅವರ ಕಾರು ದಾವಣಗೆರೆಯಲ್ಲಿ ಅಪಘಾತ !

Prasthutha|

ದಾವಣಗೆರೆ : ಮಾಜಿ ಸಚಿವ ಹಾಗೂ ಮಂಗಳೂರು ಶಾಸಕ ಯು.ಟಿ.ಖಾದರ್ ಅವರು ಪ್ರಯಾಣಿಸುತ್ತಿದ್ದ ಕಾರು ಇಂದು ಬೆಳಗ್ಗೆ 8:45ರ ಸುಮಾರಿಗೆ ದಾವಣಗೆರೆ ಸಮೀಪದ ಒಲಾಲ್ ಕ್ರಾಸ್ ಎಂಬಲ್ಲಿ ಅಪಘಾತಕ್ಕೀಡಾದ ಘಟನೆ ನಡೆದಿದೆ. ಘಟನೆಯಲ್ಲಿ ಖಾದರ್ ಅವರು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ ಎನ್ನಲಾಗಿದೆ.

- Advertisement -

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಬೆಳಗಾವಿಗೆ ಆಗಮಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ದಾವಣಗೆರೆ-ಆನಗೋಡು ಮಧ್ಯೆ ರಾಷ್ಟ್ರೀಯ ಹೆದ್ದಾರಿ 4ರ  ಒಲಾಲ್ ಕ್ರಾಸ್ ಬಳಿ ಶಾಸಕರಿದ್ದ ಕಾರಿನ ಎದುರಿನಲ್ಲಿ ಸಂಚರಿಸುತ್ತಿದ್ದ ಕಂಟೈನರೊಂದರ ಚಾಲಕ ಹಠಾತ್ ಬ್ರೇಕ್ ಹಾಕಿದ್ದು, ಈ ವೇಳೆ ಶಾಸಕರ ಕಾರು ಕಂಟೈನರ್ ಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ. ಇದರಿಂದ ಖಾದರ್ ಅವರ ಮುಖ ಮತ್ತು ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತದ ಬಳಿಕ ಬೆಂಗಳೂರಿನಲ್ಲಿರುವ ತಮ್ಮ ಕುಟುಂಬ ವೈದ್ಯರ ಬಳಿ ಹೆಚ್ಚಿನ ಚಿಕಿತ್ಸೆಗಾಗಿ ತೆರಳಿದ್ದಾರೆ. ಕಾರು ಚಾಲಕ ಕೂಡಾ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ಹನುಮಂತರಾಯ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Join Whatsapp